12:44 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭಾಗಮಂಡಲ ಗೌಡ ಸಮಾಜ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಸಮುದಾಯ ಭವನಕ್ಕೆ ಮನವಿ

15/07/2025, 19:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಗೌಡ ಸಮಾಜ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಭಾಗಮಂಡಲ ಗ್ರಾಮದಲ್ಲಿ 1983ರಲ್ಲಿ ನಿರ್ಮಿಸಿರುವ ಗೌಡ ಸಮುದಾಯದ ಕೇಂದ್ರದ ಮೂಲ ಸೌಲಭ್ಯ ಮತ್ತು ಎಲ್ಲ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನದ ನಿರ್ಮಿಸಲು ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು. ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್ ಪೊನ್ನಣ್ಣ ನೇತೃತ್ವದಲ್ಲಿ ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷರಾದ ಕುದ್ಪಾಜೆ ಪಿ ಪಳಂಗಪ್ಪರವರ ನಿಯೋಗ.

ಈ ನಿಯೋಗದಲ್ಲಿ,ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ ದಾಮೋದರ, ಅಮೆ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು