12:39 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪ್ರತಿಭಾನ್ವಿತ ತುಳುರಂಗ ಭೂಮಿ‌ ಕಲಾವಿದ, ಮೌನೇಶ ಆಚಾರ್ಯ ಮಾಣಿ ಇನ್ನಿಲ್ಲ

16/07/2025, 10:29

ಬಂಟ್ವಾಳ(reporterkarnataka.com):ತುಳು ರಂಗಭೂಮಿ‌ಯ ಪ್ರತಿಭಾನ್ವಿತ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಅವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಚಿನ್ನದ ಕೆಲಸ‌ ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌ ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿ ಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದವರು. ಸ್ನೇಹಜೀವಿಯಾಗಿದ್ದ ಇವರ ಅಗಲಿಕೆ ಗ್ರಾಮದಲ್ಲಿ ಆಘಾತಕ್ಕೆ ಕಾರಣವಾಗಿದೆ. ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು