8:59 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು ಪುನರ್ ನಾಮಕರಣ

16/07/2025, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಹಾಸನ ಜಿಲ್ಲೆಯ ಬೇಲೂರು ನಲ್ಲಿ ಉಪಟಳ ನೀಡುತ್ತಿದ್ದ ಕರಡಿ ಹೆಸರಿನ ಆನೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗುತ್ತಿದ್ದು ಸಾರ್ವಜನಿಕ ದರ್ಶನಕ್ಕೆ ಸಿದ್ದಗೊಂಡಿದ್ದಾನೆ. ಬೇಲೂರಿನ ಸುತ್ತಮುತ್ತ ಸಾಕಷ್ಟು ಉಪಟಳ ನೀಡಿ ರಾಜ್ಯಾದ್ಯoತ ಸುದ್ದಿ ಮಾಡಿದ್ದ ಈ ಆನೆಯನ್ನು ಸ್ಥಳೀಯವಾಗಿ ಕರಡಿ ಆನೆ ಎಂದು ಗುರುತಿಸಲಾಗುತ್ತಿತ್ತು.

2024ರ ಏಪ್ರಿಲ್ 18ರಂದು ನಡೆದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಪ್ರಶಾಂತ, ಸುಗ್ರೀವ, ಭೀಮ, ಅಶ್ವತಾಮ, ಮಹೇಂದ್ರ ಸಾಕಾನೆಗಳ ಸತತ ಆನೆ ಕಾರ್ಯಾಚರಣೆಯಲ್ಲಿ ಸೆರೆಯಾದ ಕರಡಿ ಆನೆಯನ್ನು ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಮಾವುತ ಕರಿಯಪ್ಪ ಮತ್ತು ಕಾವಾಡಿ ಅನಿಶ್ ಅವರಿಂದ ಪಳಸಿಗಿದ್ದು ಕರಡಿ ಬದಲು “ಬಬ್ರುವಾಹನ” ಎಂದು ನಾಮಕರಣಗೊಂಡು ಸಾರ್ವಜನಿಕ ದರ್ಶನ ನೀಡಲಿದೆ. ಸತತವಾಗಿ ಒಂದು ವರ್ಷಗಳ ಕಾಲ 37 ವರ್ಷದ ಈ ಗಂಡಾನೆಯನ್ನು ಪಳಗಿಸಿ ಎಲ್ಲಾ ರೀತಿಯ ತರಬೇತಿ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು