2:38 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ಆ.7-10ರ ವರೆಗೆ ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆ

17/07/2025, 10:04

ಚಿತ್ರ:ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com): ಅಸ್ತ್ರ ಗ್ರೂಫ್ ಆಶ್ರಯದಲ್ಲಿ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಫ್ಯಾಷನ್ ಪೇಜೆಂಟ್ ಸೌಂದರ್ಯ ಸ್ಪರ್ಧೆ ಮತ್ತು ಗ್ರ್ಯಾಂಡ್ ಫಿನಾಲೆ ನಗರದ ಅವತಾರ್ ಹೋಟೆಲ್‌ನಲ್ಲಿ ಆ.೭ರಿಂದ ೧೦ರವರೆಗೆ ಜರಗಲಿದೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕ ಸಾಹಿಲ್ ಅವರು, ‘ಮಿಸ್ ಡಿವೈನ್ ಕರಾವಳಿಗೆ ಹೊಸ ಅವಕಾಶದ ಬಾಗಿಲು. ಜಗತ್ತಿಗೆ ಮಂಗಳೂರಿನ ಸೌಂದರ್ಯವನ್ನು ಪಸರಿಸಲು ಸೂಕ್ತ ವೇದಿಕೆ. ಇದರಲ್ಲಿ ಕಾಶ್ಮೀರದಿಂದ ತೊಡಗಿ ದೇಶದ ವಿವಿಧ ಭಾಗಗಳ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಅಜಯ್ ಕುಮಾರ್ ಹಾಗೂ ಸಾಹಿಲ್ ಈವೆಂಟ್ಸ್ ಆಶ್ರಯದಲ್ಲಿ ಸ್ಪರ್ಧೆ ಆಯೋಜನೆಯಾಗಿದೆ.



ಕರಾವಳಿಯ ಪ್ರವಾಸೋದ್ಯಮಕ್ಕೆ ಇದೊಂದು ಹೊಸ ಸಾಧ್ಯತೆಯ ದಾರಿ’ ಎಂದು ಅವರು ನುಡಿದರು.
ಅಸ್ತ್ರ ಗ್ರೂಪ್ ಸಿಇಒ ಲಂಚುಲಾಲ್ ಕೆ.ಎಸ್. ಮಾತನಾಡಿ, ‘ದೇಶದ ವಿವಿಧ ಭಾಗಗಳಿಂದ ಆಯ್ದ ೫೦ ಮಂದಿ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, ಮಂಗಳೂರಿನ ಹೆಸರು ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಮತ್ತು ಇಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿವೈನ್ ದಿವಾ ಸ್ಪರ್ಧೆಗೆ ಅಸ್ತ್ರ ಸಂಸ್ಥೆಯು ಪ್ರಾಯೋಜಕತ್ವ ವಹಿಸಿದೆ. ಇದರಿಂದ ಹೊಸಬರಿಗೆ ಅವಕಾಶ ಸಿಗಲಿದೆ’ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಅಜಯ್ ಕುಮಾರ್, ಮೋಹನ್ ದಾಸ್ ರೈ, ಮಿಸ್ ಸೆಲೆಸ್ಟಿಯಲ್ ಆಫ್ ವರ್ಲ್ಢ್ ಸೃಷ್ಟಿವೇಣು, ಪ್ರಮುಖರಾದ ಪಮ್ಮಿ ಕೊಡಿಯಾಲ್‌ ಬೈಲ್, ಮೋಹನ್‌ದಾಸ್ ರೈ, ಸಂದೀಪ್ ಶೆಟ್ಟಿ, ಯಶಿಕಾ, ಫವಾಜ್, ಅಭಿಷೇಕ್, ಇಮ್ರಾನ್, ಅಜಿತ್ ಸಿಂಗ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು