11:48 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ

17/07/2025, 14:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರುವ ಕೆಲಸವನ್ನು ಬಿಟ್ಟು ಹಾಡ ಹಗಲೇ ಚಿನ್ನಾಭರಣ ಮಳಿಗೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಮಾಲೀಕರ ಗಮನ ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಯುವಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನೆಹರು ನಗರ ನಿವಾಸಿ ರಿಚರ್ಡ್ (25) ಬಂಧಿತ ಆರೋಪಿಯಾಗಿದ್ದು, ಹಣದಾಸೆಗೆ ಅಪರಾಧ ಪ್ರಕರಣಗಳಲ್ಲಿ ರಿಚಾರ್ಡ್ ಭಾಗಿಯಾಗುತ್ತಿದ್ದ ಎನ್ನಲಾಗಿದ್ದು ಬಂಧಿತನಿಂದ 13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲೇಶ್ವರಂ ನ ಜನನಿಬಿಡ ಸಂಪಿಗೆ ರಸ್ತೆ ಯಲ್ಲಿನ ಕನಿಷ್ಕಾ ಜ್ಯುವೆಲರಿ ಶಾಪ್ ನಲ್ಲಿ ಚಿನ್ನದ ಸರ ಖರೀದಿ ನೆಪದಲ್ಲಿ ಬೇರೆ ಬೇರೆ ಡಿಸೈನ್ ತೋರಿಸವಂತೆ ಹೇಳಿ ಮೂರು ಸರ ಕಳುವು ಮಾಡಿ ಪರಾರಿಯಾಗಿದ್ದ, ಇದೇ ರೀತಿ ಬ್ಯಾತಾರಾಯಪುರ ದಲ್ಲೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇರುವ ಕೆಲಸ ಬಿಟ್ಟು ಪೂರ್ಣವದಿ ಕಳ್ಳತನಕ್ಕೆ ಇಳಿದಿದ್ದ ರಿಚರ್ಡ್ ಪತ್ತೆಗೆ ಬಲೆ ಬೀಸಿದ್ದು, ಈತ ವಾಸವಿದ್ದ ವೈಟ್ ಫೀಲ್ಡ್ ಪಿಜಿ ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮೈಸೂರು, ಮಂಗಳೂರು, ಕೇರಳ ಸೇರಿದಂತೆ ಒಟ್ಟು 9 ಪ್ರಕರಣ ಈತನ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು