8:46 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ

17/07/2025, 14:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರುವ ಕೆಲಸವನ್ನು ಬಿಟ್ಟು ಹಾಡ ಹಗಲೇ ಚಿನ್ನಾಭರಣ ಮಳಿಗೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಮಾಲೀಕರ ಗಮನ ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಯುವಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನೆಹರು ನಗರ ನಿವಾಸಿ ರಿಚರ್ಡ್ (25) ಬಂಧಿತ ಆರೋಪಿಯಾಗಿದ್ದು, ಹಣದಾಸೆಗೆ ಅಪರಾಧ ಪ್ರಕರಣಗಳಲ್ಲಿ ರಿಚಾರ್ಡ್ ಭಾಗಿಯಾಗುತ್ತಿದ್ದ ಎನ್ನಲಾಗಿದ್ದು ಬಂಧಿತನಿಂದ 13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲೇಶ್ವರಂ ನ ಜನನಿಬಿಡ ಸಂಪಿಗೆ ರಸ್ತೆ ಯಲ್ಲಿನ ಕನಿಷ್ಕಾ ಜ್ಯುವೆಲರಿ ಶಾಪ್ ನಲ್ಲಿ ಚಿನ್ನದ ಸರ ಖರೀದಿ ನೆಪದಲ್ಲಿ ಬೇರೆ ಬೇರೆ ಡಿಸೈನ್ ತೋರಿಸವಂತೆ ಹೇಳಿ ಮೂರು ಸರ ಕಳುವು ಮಾಡಿ ಪರಾರಿಯಾಗಿದ್ದ, ಇದೇ ರೀತಿ ಬ್ಯಾತಾರಾಯಪುರ ದಲ್ಲೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇರುವ ಕೆಲಸ ಬಿಟ್ಟು ಪೂರ್ಣವದಿ ಕಳ್ಳತನಕ್ಕೆ ಇಳಿದಿದ್ದ ರಿಚರ್ಡ್ ಪತ್ತೆಗೆ ಬಲೆ ಬೀಸಿದ್ದು, ಈತ ವಾಸವಿದ್ದ ವೈಟ್ ಫೀಲ್ಡ್ ಪಿಜಿ ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮೈಸೂರು, ಮಂಗಳೂರು, ಕೇರಳ ಸೇರಿದಂತೆ ಒಟ್ಟು 9 ಪ್ರಕರಣ ಈತನ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು