7:45 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ

17/07/2025, 14:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರುವ ಕೆಲಸವನ್ನು ಬಿಟ್ಟು ಹಾಡ ಹಗಲೇ ಚಿನ್ನಾಭರಣ ಮಳಿಗೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಮಾಲೀಕರ ಗಮನ ಬೇರೆಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಯುವಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನೆಹರು ನಗರ ನಿವಾಸಿ ರಿಚರ್ಡ್ (25) ಬಂಧಿತ ಆರೋಪಿಯಾಗಿದ್ದು, ಹಣದಾಸೆಗೆ ಅಪರಾಧ ಪ್ರಕರಣಗಳಲ್ಲಿ ರಿಚಾರ್ಡ್ ಭಾಗಿಯಾಗುತ್ತಿದ್ದ ಎನ್ನಲಾಗಿದ್ದು ಬಂಧಿತನಿಂದ 13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲೇಶ್ವರಂ ನ ಜನನಿಬಿಡ ಸಂಪಿಗೆ ರಸ್ತೆ ಯಲ್ಲಿನ ಕನಿಷ್ಕಾ ಜ್ಯುವೆಲರಿ ಶಾಪ್ ನಲ್ಲಿ ಚಿನ್ನದ ಸರ ಖರೀದಿ ನೆಪದಲ್ಲಿ ಬೇರೆ ಬೇರೆ ಡಿಸೈನ್ ತೋರಿಸವಂತೆ ಹೇಳಿ ಮೂರು ಸರ ಕಳುವು ಮಾಡಿ ಪರಾರಿಯಾಗಿದ್ದ, ಇದೇ ರೀತಿ ಬ್ಯಾತಾರಾಯಪುರ ದಲ್ಲೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇರುವ ಕೆಲಸ ಬಿಟ್ಟು ಪೂರ್ಣವದಿ ಕಳ್ಳತನಕ್ಕೆ ಇಳಿದಿದ್ದ ರಿಚರ್ಡ್ ಪತ್ತೆಗೆ ಬಲೆ ಬೀಸಿದ್ದು, ಈತ ವಾಸವಿದ್ದ ವೈಟ್ ಫೀಲ್ಡ್ ಪಿಜಿ ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮೈಸೂರು, ಮಂಗಳೂರು, ಕೇರಳ ಸೇರಿದಂತೆ ಒಟ್ಟು 9 ಪ್ರಕರಣ ಈತನ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು