3:02 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Vijayanagara | ಕೂಡ್ಲಿಗಿ ಶ್ರೀ ಕನ್ನಿಕಾ ಪರಮೇಶ್ವರಿಗೆ ವಿಶೇಷ ಅಲಂಕಾರ ಪೂಜೆ: ಪಲ್ಲಕ್ಕಿ ಸೇವೆ, ಭಜನಾರಾಧನೆ

17/07/2025, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೃದಯ ಭಾಗದಲ್ಲಿರುವ, ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜು.15ರಂದು ಅಷಾಡ ಮಂಗಳವಾರದಂದು ಶ್ರೀಕನ್ನಿಕಾ ಪರಮೇಶ್ವರಿ ತಾಯಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಪಲ್ಲಕ್ಕಿ ಸೇವೆ ಭಜನಾರಾಧನೆ ಜರುಗಿತು. ಅರ್ಚಕರಾದ ಗುರುಸ್ವಾಮಿರವರ ನೇತೃತ್ವದಲ್ಲಿ , ಶ್ರೀಕನ್ನಿಕಾ ಪರಮೇಶ್ವರಿ ಸೇವಾ ಸಮಿತಿಯವರು. ಆಷಾಢ ಮಾಸದ ಮಂಗಳವಾರದಂದು , ದೇವಿಗೆ ವಿಶೇಷ ಅಲಂಕಾರ ಪೂಜೆ ಪಲ್ಲಕ್ಕಿ ಸೇವೆ ಹಾಗೂ ಭಜನಾರಾಧನೆಯನ್ನು ಸಲ್ಲಿಸಿದರು. ಅಲ್ಲದೇ ಆಷಾಡ ಮಾಸದ ಮಂಗಳವಾರದ ಪ್ರಯುಕ್ತ , ಪಟ್ಟಣದ ವಿವಿದ ದೇವಸ್ಥಾನಗಳಲ್ಲಿನ ದೇವರಿಗೆ ವಿಶೇಷ ಆರಾಧನೆ ಸೇವೆ ಸಲ್ಲಿಸಲಾಯಿತು. ಪಟ್ಟಣದ ಆರಾಧ್ಯ ದೇವ ಗ್ರಾಮ ದೇವತೆ ಶ್ರೀಊರಮ್ಮ ದೇವಿ , ಶ್ರೀಕೊತ್ತಲಾಂಜನೇಯ , ಶ್ರಿವೆಂಕಟೇಶ್ವರ , ಶ್ರೀಕೊತ್ತಲಾಂಜನೇಯ , ಶ್ರೀಸೊಲ್ಲಮ್ಮದೇವಿ ಯ ವಿಶೇಷ ಪೂಜೆ ಹಾಗೂ ಆರಾಧನೆ ಜರುಗಿಸಲಾಯಿತು. ಆಷಾಢ ಮಾಸದಲ್ಲಿ ಈ ರೀತಿ ವಿಶೇಷ ಪೂಜೆಯನ್ನು ಮಾಡುವುದರಿಂದ , ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಬಹುದಾಗಿದೆ. ಹಾಗೂ ಅವರು ಎಲ್ಲಾ ಬಗೆಯ ಫಲಗಳನ್ನು , ದ್ವಿಗುಣವಾಗಿ ಪಡೆಯುವ ಫಲಿತಾಂಶ ಸಿಗುತ್ತದೆ ಎಂದು ಹೇಳಲಾಗುತ್ತದೆ.


ಆಷಾಢ ಮಾಸದಲ್ಲಿ ಶ್ರೀಕನ್ನಿಕಾ ಪರಮೇಶ್ವರಿ ಮತ್ತು ಮಂಗಲ ದೇವರಿಗೆ , ವಿಶೇಷ ಅಲಂಕಾರ ಪೂಜೆ ಭಜನೆ ಪಲ್ಲಕ್ಕಿ ಸೇವೆ ಸಲ್ಲಿಸುವುದರ ಜೊತೆಗೆ, ವೆಂಕಟೇಶ್ವರ, ಸೂರ್ಯ ದೇವ, ದುರ್ಗಾ ಮತ್ತು ಲಕ್ಷ್ಮಿದೇವಿಯರ. ಮತ್ತು ಆಂಜನೇಯನನ್ನು ಪೂಜಿಸುವುದು , ಭಕ್ತರಿಗೆ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
ಪ್ರತಿ ಮಂಗಳವಾರದಂದು ಶ್ರೀಕನ್ನಿಕಾ ಪರಮೇಶ್ವರಿ , ಹಾಗೂ ಹನುಮಂತನ ದೇವಸ್ಥಾನಕ್ಕೆ ತರಳಿ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸುವುದರಿಂದ ವಿಶೇಷ ಫಲಗಳು ದೊರಕಲಿವೆ ಎಂದು ಹೇಳಲಾಗುತ್ತದೆ. ದೇವರ ಸನ್ನಿಧಾನದಲ್ಲಿ ದೇವರ ಮಂತ್ರಗಳ ಪಠನೆ ಭಜನಾರಾಧನೆ ಸೇವೆ ಮಾಡುವುದರಿಂದ , ಶ್ರಿಕನ್ನಿಕಾ ಪರಮೇಶ್ವರಿ ಹಾಗೂ ಮಂಗಳ ದೇವರಿಗೆ ಸಂಬಂಧಿಸಿದ ಮಂತ್ರಗಳನ್ನು ಪಠಿಸುವುದರಿಂದ. ಸಕಲ ಕಷ್ಟಗಳಿಂದ ಮುಕ್ತಿ , ಹಾಗೂ ಇಷ್ಟಾರ್ಥಗಳು ಸಿದ್ಧಿಸಿ ಲಭಿಸುವುದೆಂದು ಆಧ್ಯಾತ್ಮ ಚಿಂತಕರು ತಿಳಿಸಿದ್ದಾರೆ. ಆಷಾಢ ಮಾಸದಲ್ಲಿ ಇಷ್ಟ ದೇವ ಕುಲ ದೇವ ಗ್ರಾಮ ದೇವರ ಆರಾಧನೆಯಿಂದ, ಜೀವನದಲ್ಲಿ ಎದುರಾಗುವ ಕಷ್ಟಗಳು ದೂರವಾಗುತ್ತವೆ ಮತ್ತು ಸಕಲ ಭಾಗ್ಯಗಳು ಪ್ರಾಪ್ತಿಯಾಗುತ್ತವೆ ಎಂದು ಹೇಳಲಾಗುತ್ತದೆ. ಅಂತೆಯೇ ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ , ಆಷಾಢ ಮಂಗಳವಾರದಂದು ಪಟ್ಟಣದ ಆರ್ಯ ವೈಷ್ಯ ಸಂಘದವರು. ಶ್ರೀಕನ್ನಿಕಾ ಪರಮೇಶ್ವರಿ ದೇವರ ಸೇವಾ ಸಮಿತಿಯವರು , ದೇವಿಗೆ ವಿಶೇಷ ಅಲಂಕಾರ ಪಲ್ಲಕ್ಕಿ ಸೇವೆ ಭಜನಾರಾಧನೆ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆರ್ಯ ವೈಷ್ಯ ಸಮಾಜದ ನೂರಾರು ಮಹಿಳೆಯರು , ನೂರಾರು ಯುವಕರು ಹಿರಿಯರು ಶ್ರೀಕನ್ನಿಕಾದೇವಿಯ ಆರಾಧನೆ ಸೇವೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು