11:14 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Chikkamagaluru | ರಸ್ತೆ ದುರಾವಸ್ಥೆ: ಪ್ರಧಾನಿ ಮೋದಿಗೆ ಕೊಪ್ಪದ ಬಾಲಕಿ ಸಿಂಧೂರ ಪತ್ರ

18/07/2025, 10:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ
ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ
ಪುಟ್ಟ ಬಾಲಕಿಯೊಬ್ಬಳು ತನ್ನೂರಿನಿಂದ ಶಾಲೆಗೆ ಸಾಗುವ ರಸ್ತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ.
ಮಳೆಗಾಲದಲ್ಲಿ ಕೆಸರುಮಯವಾಗುವ ರಸ್ತೆಯಲ್ಲಿ ಶಾಲೆಗೆ ಹೋಗುವುದು ಗುರಿ ಸಾಧನೆಯಂತೆ ಆಗುತ್ತಿದೆ. ಮನೆಯಿಂದ ಶಾಲೆಗೆ ದಿನವೂ 3-4 ಕಿ.ಮೀ. ನಡೆಯುವ ಸಿಂಧೂರ ಹೆಸರಿನ ಬಾಲಕಿ, ಗ್ರಾಮೀಣ ರಸ್ತೆಯ ದುಸ್ಥಿತಿಯಿಂದ ಬೇಸತ್ತಿದ್ದಾಳೆ. ತನ್ನ ಊರಿನ ಮುಖ್ಯ ರಸ್ತೆಯು ತುಂಬಾ ಹಾಳಾಗಿದ್ದು, ಮಳೆ ಬಂದರೆ ಓಡಾಡುವುದೇ ದುಸ್ತರವಾಗುತ್ತದೆ ಎಂದು ಹೇಳಿರುವ ಸಿಂಧೂರ, ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸಿಂಧೂರ ತನ್ನ ಪತ್ರದಲ್ಲಿ ಹೇಳಿರುವಂತೆ:

> “ನಮ್ಮ ಊರಿಗೆ ಒಂದು ಉತ್ತಮ ರಸ್ತೆ ಬೇಕಾಗಿದೆ. ಶಾಲೆಗೆ ಹೋಗುವ ಬದಿಯಲ್ಲಿ ಬೇರೆ ದಾರಿಯೇ ಇಲ್ಲ. ವಾರದಲ್ಲಿ 3-4 ದಿನ ಶಾಲೆಗೆ ಹೋಗಲು ಸಾಧ್ಯವಿಲ್ಲ. ಮಕ್ಕಳು, ಮಹಿಳೆಯರು ಎಲ್ಲರೂ ಸಮಸ್ಯೆ ಅನುಭವಿಸುತ್ತಿದ್ದಾರೆ. ದಯವಿಟ್ಟು ನಮ್ಮ ರಸ್ತೆಯನ್ನು ದುರಸ್ತಿ ಮಾಡಿಸಿ.”


ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯಲ್ಲಿ ಪತ್ರ ಬರೆದಿರುವ ಈ ಬಾಲಕಿಯ ಹೃದಯಸ್ಪರ್ಶಿ ಮನವಿ ಇದೀಗ ಗ್ರಾಮದಲ್ಲಿಯೇ ಅಲ್ಲ, ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ.
ಪ್ರಮುಖ ವಿಷಯವೆಂದರೆ, ಈ ಭಾಗದ ರಸ್ತೆ ಮಾತ್ರ ಶಾಲೆಗಷ್ಟೇ ಅಲ್ಲದೆ, ದಿನನಿತ್ಯದ ಆರೋಗ್ಯ ಸೇವೆ, ಅಗತ್ಯ ವಸ್ತುಗಳ ಸಾಗಣೆ, ಹಾಗೂ ಎಮರ್ಜೆನ್ಸಿ ಸಂದರ್ಭಗಳಿಗೂ ಪ್ರಮುಖ ದಾರಿ. ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸ್ಪಂದಿಸುವ ಸಮಯ ಇದಾಗಿದೆ ಎಂಬ ಅಭಿಪ್ರಾಯ ಈಗ ಸಾರ್ವಜನಿಕದಲ್ಲಿ ಮೂಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು