10:59 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಕ್ಷೇತ್ರದಲ್ಲಿ ತೀರ್ಥಹಳ್ಳಿ ಹುಡುಗ ನಿತಿನ್ ಸಾಧನೆ!: ಐಪಿಎಲ್ ಗೆ ಆಯ್ಕೆಯಾಗುವ ಸಾಧ್ಯತೆ

18/07/2025, 10:32

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com

ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಪಂದ್ಯಕ್ಕೆ ಇದೀಗ ತೀರ್ಥಹಳ್ಳಿ
ತಾಲೂಕಿನ ನಿತಿನ್ ಆಯ್ಕೆ ಆಗಿದ್ದು, ಹುಬ್ಬಳ್ಳಿ ತಂಡದಲ್ಲಿ ಅಡಲಿದ್ದಾರೆ.
ನಿತಿನ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನ ಆರಗ ಮೂಲದ ಶಾಂತವೇರಿಯವರು.
ತಂದೆ ನಾಗರಾಜ , ತಾಯಿ ಗಾಯತ್ರಿ, ಸಹೋದರಿ ನೇಹಾ.
ತೀರ್ಥಹಳ್ಳಿಯ ಅಬ್ದುಲ್ ಕಲಾಂ ಅವರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಯಲ್ಲಿ ತರಬೇತಿ ಪಡೆದ ಆರಗ ಶಾಂತವೇರಿ ಗ್ರಾಮದ ನಿತಿನ್ ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಆಯ್ಕೆ ಆಗಿರುವುದು ಇದೀಗ ತೀರ್ಥಹಳ್ಳಿಯ ಹಾಗೂ ಮಲೆನಾಡ ಜನರಿಗೆ ಹೆಮ್ಮೆಯ ವಿಷಯವಾಗಿದೆ.
ನಿತಿನ್ ಮೊದಲು ಕ್ರಿಕೆಟ್ ಆರಂಭಿಸಿದ್ದು ನ್ಯಾಷನಲ್ ಸಂಸ್ಥೆಯ ಅಬ್ದುಲ್ ಕಲಾಂ ಅವರ ತೀರ್ಥಹಳ್ಳಿಯ ಬಾಳೆಬೈಲಿನ ಸಿಟಿ ಕ್ಲಬ್ ಅಲ್ಲಿ. ಇಲ್ಲಿ ಈತನಿಗೆ ಲೆದರ್ ಆಡುವ ಅವಕಾಶ ಕಲ್ಪಿಸಿತು, ನಂತರ ಬೆಂಗಳೂರಿನಲ್ಲಿ ಇವನ ಬೌಲಿಂಗ್‌ ಮಾಡೋ ರೀತಿ ನೋಡಿ ಅಭಿಮನ್ಯು ಮಿಥುನ್ ಅವರ ತಮ್ಮ ರನ್ ಅಪ್ ಅಕಾಡೆಮಿ ಯಲ್ಲಿ ಉಚಿತ ಕೋಚ್ ಜೀಮ್ ಬೇಕಾದ ಪ್ರೋಟಿನ್ ಗಳನ್ನು ಒದಗಿಸುವುದರ ಮೂಲಕ ಕೈ ಹಿಡಿಯುತ್ತಾರೆ. ಕಠಿಣ ತರಬೇತಿ ಬಳಿಕ ಈಗಾಗಲೇ 140 ಸ್ಪೀಡ್ ನಲ್ಲಿ ಬಾಲ್ ಎಸೆಯುವ ಸಾಮರ್ಥ್ಯ ಇರುವ ನಿತಿನ್ ಅವರನ್ನು ಹುಬ್ಬಳ್ಳಿ ಟೈಗರ್ಸ್ ಗುರುತಿಸಿ 25 ಲಕ್ಷಕ್ಕೆ ಬಿಡ್ ಮಾಡಿದೆ.
6.3 ಎತ್ತರದ ನೀಳಕಾಯದ ಈ ಯುವಕನಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಎಲ್ಲಾ ಅರ್ಹತೆ ಇದೆ.
ನಿತಿನ್ ಅವರನ್ನು ಕಳೆದ ಬಾರಿಯ ಕೆಪಿಎಲ್ ವಿನ್ನಿಂಗ್ ತಂಡ ವಾದ ಹುಬ್ಬಳ್ಳಿ ಟೈಗರ್ಸ್ ಬಿಡ್ ಮಾಡಿ ತಮ್ಮ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದು ಅತ್ಯುತ್ತಮ ಕ್ರಿಕೆಟ್ ಕ್ರೀಡಾ ಪಟುವಾಗಿರುವ ನಿತಿನ್ ಕೆಪಿಎಲ್ ನಲ್ಲಿ ಚೆನ್ನಾಗಿ ಆಟವಾಡಿದರೆ ಐಪಿಎಲ್ ಕದ ತಟ್ಟುವ ಸಾಧ್ಯತೆ ಕೂಡ ಹೆಚ್ಚಿದೆ. ಈತನ ಸಾಧನೆಯನ್ನು ಪೋಷಕರು, ಸ್ನೇಹಿತರು, ಅಭಿಮಾನಿಗಳು, ಪಟ್ಟಣದ ಸಾರ್ವಜನಿಕರು ಪ್ರಶಂಶಿಸಿ ಶುಭ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು