11:00 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಕ್ರಿಕೆಟ್ ಕ್ಷೇತ್ರದಲ್ಲಿ ತೀರ್ಥಹಳ್ಳಿ ಹುಡುಗ ನಿತಿನ್ ಸಾಧನೆ!: ಐಪಿಎಲ್ ಗೆ ಆಯ್ಕೆಯಾಗುವ ಸಾಧ್ಯತೆ

18/07/2025, 10:32

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com

ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಪಂದ್ಯಕ್ಕೆ ಇದೀಗ ತೀರ್ಥಹಳ್ಳಿ
ತಾಲೂಕಿನ ನಿತಿನ್ ಆಯ್ಕೆ ಆಗಿದ್ದು, ಹುಬ್ಬಳ್ಳಿ ತಂಡದಲ್ಲಿ ಅಡಲಿದ್ದಾರೆ.
ನಿತಿನ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನ ಆರಗ ಮೂಲದ ಶಾಂತವೇರಿಯವರು.
ತಂದೆ ನಾಗರಾಜ , ತಾಯಿ ಗಾಯತ್ರಿ, ಸಹೋದರಿ ನೇಹಾ.
ತೀರ್ಥಹಳ್ಳಿಯ ಅಬ್ದುಲ್ ಕಲಾಂ ಅವರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಯಲ್ಲಿ ತರಬೇತಿ ಪಡೆದ ಆರಗ ಶಾಂತವೇರಿ ಗ್ರಾಮದ ನಿತಿನ್ ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಆಯ್ಕೆ ಆಗಿರುವುದು ಇದೀಗ ತೀರ್ಥಹಳ್ಳಿಯ ಹಾಗೂ ಮಲೆನಾಡ ಜನರಿಗೆ ಹೆಮ್ಮೆಯ ವಿಷಯವಾಗಿದೆ.
ನಿತಿನ್ ಮೊದಲು ಕ್ರಿಕೆಟ್ ಆರಂಭಿಸಿದ್ದು ನ್ಯಾಷನಲ್ ಸಂಸ್ಥೆಯ ಅಬ್ದುಲ್ ಕಲಾಂ ಅವರ ತೀರ್ಥಹಳ್ಳಿಯ ಬಾಳೆಬೈಲಿನ ಸಿಟಿ ಕ್ಲಬ್ ಅಲ್ಲಿ. ಇಲ್ಲಿ ಈತನಿಗೆ ಲೆದರ್ ಆಡುವ ಅವಕಾಶ ಕಲ್ಪಿಸಿತು, ನಂತರ ಬೆಂಗಳೂರಿನಲ್ಲಿ ಇವನ ಬೌಲಿಂಗ್‌ ಮಾಡೋ ರೀತಿ ನೋಡಿ ಅಭಿಮನ್ಯು ಮಿಥುನ್ ಅವರ ತಮ್ಮ ರನ್ ಅಪ್ ಅಕಾಡೆಮಿ ಯಲ್ಲಿ ಉಚಿತ ಕೋಚ್ ಜೀಮ್ ಬೇಕಾದ ಪ್ರೋಟಿನ್ ಗಳನ್ನು ಒದಗಿಸುವುದರ ಮೂಲಕ ಕೈ ಹಿಡಿಯುತ್ತಾರೆ. ಕಠಿಣ ತರಬೇತಿ ಬಳಿಕ ಈಗಾಗಲೇ 140 ಸ್ಪೀಡ್ ನಲ್ಲಿ ಬಾಲ್ ಎಸೆಯುವ ಸಾಮರ್ಥ್ಯ ಇರುವ ನಿತಿನ್ ಅವರನ್ನು ಹುಬ್ಬಳ್ಳಿ ಟೈಗರ್ಸ್ ಗುರುತಿಸಿ 25 ಲಕ್ಷಕ್ಕೆ ಬಿಡ್ ಮಾಡಿದೆ.
6.3 ಎತ್ತರದ ನೀಳಕಾಯದ ಈ ಯುವಕನಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಎಲ್ಲಾ ಅರ್ಹತೆ ಇದೆ.
ನಿತಿನ್ ಅವರನ್ನು ಕಳೆದ ಬಾರಿಯ ಕೆಪಿಎಲ್ ವಿನ್ನಿಂಗ್ ತಂಡ ವಾದ ಹುಬ್ಬಳ್ಳಿ ಟೈಗರ್ಸ್ ಬಿಡ್ ಮಾಡಿ ತಮ್ಮ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದು ಅತ್ಯುತ್ತಮ ಕ್ರಿಕೆಟ್ ಕ್ರೀಡಾ ಪಟುವಾಗಿರುವ ನಿತಿನ್ ಕೆಪಿಎಲ್ ನಲ್ಲಿ ಚೆನ್ನಾಗಿ ಆಟವಾಡಿದರೆ ಐಪಿಎಲ್ ಕದ ತಟ್ಟುವ ಸಾಧ್ಯತೆ ಕೂಡ ಹೆಚ್ಚಿದೆ. ಈತನ ಸಾಧನೆಯನ್ನು ಪೋಷಕರು, ಸ್ನೇಹಿತರು, ಅಭಿಮಾನಿಗಳು, ಪಟ್ಟಣದ ಸಾರ್ವಜನಿಕರು ಪ್ರಶಂಶಿಸಿ ಶುಭ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು