1:26 AM Saturday19 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪವರ್ ಮ್ಯಾನ್

18/07/2025, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿದ್ಯುತ್ ಶಾಕ್ ನಿಂದ ಯುವ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್. ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪ್ರವೀಣ್ (26) ಮೃತ ದುರ್ದೈವಿ. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಪ್ರವೀಣ್ ಅವರ ಮದುವೆಯಾಗಿತ್ತು.
ವಿದ್ಯುತ್ ಲೈನ್ ದುರಸ್ತಿಗೆ ಕಂಬ ಹತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಂಬ ಹತ್ತಿ ಫ್ಯೂಸ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಕೆಳಗೆ ಬಿದ್ದು ಒದ್ದಾಡುತ್ತಿದ್ದ ಪ್ರವೀಣ್ ಅವರನ್ನು ಸ್ಥಳಿಯರು ಹಾಗೂ ಸಿಬ್ಬಂದಿಗಳು ಸೇರಿ ಆಸ್ಪತ್ರೆಗೆ ಸಾಗಿಸಿದರೂ ತೀವ್ರ ಅಸ್ವಸ್ಥತನಾಗಿದ್ದ ಪ್ರವೀಣ್ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.
ಮೂಲತಃ ಬಾಗಲಕೋಟೆಯವರಾದ ಪ್ರವೀಣ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಈ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು