10:49 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಕೊಡಗು ಗಡಿ ಪ್ರದೇಶದಲ್ಲಿ ಭಾರಿ ಮಳೆ: ಮಂಞಡ್ಕ ನದಿಯಲ್ಲಿ ಬೈಕ್ ಸಮೇತ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ

18/07/2025, 20:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಮಂಞಡ್ಕ ನದಿಯಲ್ಲಿ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗಿದೆ.


ಬೆಳಗಾಂನ ಸಿಂದೋಗಿನಿಂದ ರಬ್ಬರ್ ಪ್ಲಾಂಟೇಷನ್ ನಲ್ಲಿ ಹಿಟಾಚಿ ಕೆಲಸಕ್ಕೆ ಆಗಮಿಸಿದ್ದ ತಂಡಲ್ಲಿ ಇದ್ದ ಸಹಾಯಕನಾಗಿದ್ದ ದುರ್ಗಪ್ಪ ಮಾದರ (19) ಊಟ ತರಲೆಂದು ಸೇತುವೆ ದಾಟಿ ಕರಿಕೆಗೆ ಬೈಕ್ ನಲ್ಲಿ ತೆರಳಿದ್ದ ಎನ್ನಲಾಗಿದೆ. ಹಲವು ಸಮಯ ಕಳೆದರು ದುರ್ಗಪ್ಪ ವಾಪಸು ಬರದಿರುವ ಹಿನ್ನೆಲೆಯಲ್ಲಿ ಹಿಟಾಚಿ ಚಾಲಕ ತನ್ನ ಪತ್ನಿಗೆ ಕರೆ ಮಾಡಿದ್ದ್ದು, ದುರ್ಗಪ್ಪ ಬಂದಿಲ್ಲ ಎಂದು ತಿಳಿದು ಬಂದಿದೆ. ಇದೇ ಸಮಯದಲ್ಲಿ ಭಾರಿ ಮಳೆಗೆ ಸೇತುವೆ ಮುಳುಗಿದ್ದು, ಸ್ಥಳದಲ್ಲಿ ಬೈಕ್ ನ ಗುರುತುಗಳು ಪತ್ತೆಯಾಗಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನ ಅಗ್ನಿ ಶಾಮಕ ಮತ್ತು NDRF ತಂಡ ಸುಮಾರು 5 ಕಿಲೋಮೀಟರು ವರೆಗೆ ಶೋಧ ಕಾರ್ಯ ನಡೆಸಿದೆ. ಬೆಳಗಾವಿಯಿಂದ ಮೃತನ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಆಕ್ರಂಧನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು