11:20 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಕೊಡಗು ಗಡಿ ಪ್ರದೇಶದಲ್ಲಿ ಭಾರಿ ಮಳೆ: ಮಂಞಡ್ಕ ನದಿಯಲ್ಲಿ ಬೈಕ್ ಸಮೇತ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ

18/07/2025, 20:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಮಂಞಡ್ಕ ನದಿಯಲ್ಲಿ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗಿದೆ.


ಬೆಳಗಾಂನ ಸಿಂದೋಗಿನಿಂದ ರಬ್ಬರ್ ಪ್ಲಾಂಟೇಷನ್ ನಲ್ಲಿ ಹಿಟಾಚಿ ಕೆಲಸಕ್ಕೆ ಆಗಮಿಸಿದ್ದ ತಂಡಲ್ಲಿ ಇದ್ದ ಸಹಾಯಕನಾಗಿದ್ದ ದುರ್ಗಪ್ಪ ಮಾದರ (19) ಊಟ ತರಲೆಂದು ಸೇತುವೆ ದಾಟಿ ಕರಿಕೆಗೆ ಬೈಕ್ ನಲ್ಲಿ ತೆರಳಿದ್ದ ಎನ್ನಲಾಗಿದೆ. ಹಲವು ಸಮಯ ಕಳೆದರು ದುರ್ಗಪ್ಪ ವಾಪಸು ಬರದಿರುವ ಹಿನ್ನೆಲೆಯಲ್ಲಿ ಹಿಟಾಚಿ ಚಾಲಕ ತನ್ನ ಪತ್ನಿಗೆ ಕರೆ ಮಾಡಿದ್ದ್ದು, ದುರ್ಗಪ್ಪ ಬಂದಿಲ್ಲ ಎಂದು ತಿಳಿದು ಬಂದಿದೆ. ಇದೇ ಸಮಯದಲ್ಲಿ ಭಾರಿ ಮಳೆಗೆ ಸೇತುವೆ ಮುಳುಗಿದ್ದು, ಸ್ಥಳದಲ್ಲಿ ಬೈಕ್ ನ ಗುರುತುಗಳು ಪತ್ತೆಯಾಗಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನ ಅಗ್ನಿ ಶಾಮಕ ಮತ್ತು NDRF ತಂಡ ಸುಮಾರು 5 ಕಿಲೋಮೀಟರು ವರೆಗೆ ಶೋಧ ಕಾರ್ಯ ನಡೆಸಿದೆ. ಬೆಳಗಾವಿಯಿಂದ ಮೃತನ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಆಕ್ರಂಧನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು