4:16 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ

19/07/2025, 15:16

ಮಂಗಳೂರು(reporterkarnataka.com): ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ, ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ, ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು ಎಂದು ಜಿಎಸ್ಟಿ-ಆದಾಯ ತೆರಿಗೆ ಸಲಹೆಗಾರ ಯು. ಪುಂಡರೀಕಾಕ್ಷ ಮೂಲ್ಯ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿರ್ಮಿಸಿದ, ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಬಲ್ಮಠ ಸರಕಾರಿ ಪಿಯು ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.
ಜಾತಿ, ಮತ, ಭೇದವನ್ನು ಮರೆತು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ತುಳುವಿನ ಮೂಲಕ ನಾವೆಲ್ಲರೂ ಒಗ್ಗಟ್ಟನ್ನು ಮತ್ತು ಬಾಂಧವ್ಯವನ್ನು ಬೆಸೆಯೋಣ ಎಂದು ಪುಂಡರೀಕಾಕ್ಷ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಇಂಟ್ಯಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ ಬಸು, ಅಮೃತ ಕಾಲೇಜ್ ಪ್ರಾಂಶುಪಾಲರಾದ ಡಾ.ಚಂದ್ರಹಾಸ ಕಣ್ವತೀರ್ಥ, ಬಲ್ಮಠ ಸರಕಾರಿ ಪಿ.ಯು ಹೆಣ್ಮಕ್ಕಳ ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಶುಭ ಕೋರಿ ಮಾತನಾಡಿದರು.


ನಾಟಕದ ನಿರ್ದೇಶಕ ಜಗನ್ ಪವಾರ್ ಬೇಕಲ್ ಸ್ವಾಗತಿಸಿ ನಿರೂಪಿಸಿದರು. ಅಕಾಡೆಮಿ ಸದಸ್ಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು