8:39 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ

19/07/2025, 15:16

ಮಂಗಳೂರು(reporterkarnataka.com): ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ, ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ, ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು ಎಂದು ಜಿಎಸ್ಟಿ-ಆದಾಯ ತೆರಿಗೆ ಸಲಹೆಗಾರ ಯು. ಪುಂಡರೀಕಾಕ್ಷ ಮೂಲ್ಯ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿರ್ಮಿಸಿದ, ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಬಲ್ಮಠ ಸರಕಾರಿ ಪಿಯು ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.
ಜಾತಿ, ಮತ, ಭೇದವನ್ನು ಮರೆತು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ತುಳುವಿನ ಮೂಲಕ ನಾವೆಲ್ಲರೂ ಒಗ್ಗಟ್ಟನ್ನು ಮತ್ತು ಬಾಂಧವ್ಯವನ್ನು ಬೆಸೆಯೋಣ ಎಂದು ಪುಂಡರೀಕಾಕ್ಷ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಇಂಟ್ಯಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ ಬಸು, ಅಮೃತ ಕಾಲೇಜ್ ಪ್ರಾಂಶುಪಾಲರಾದ ಡಾ.ಚಂದ್ರಹಾಸ ಕಣ್ವತೀರ್ಥ, ಬಲ್ಮಠ ಸರಕಾರಿ ಪಿ.ಯು ಹೆಣ್ಮಕ್ಕಳ ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಶುಭ ಕೋರಿ ಮಾತನಾಡಿದರು.


ನಾಟಕದ ನಿರ್ದೇಶಕ ಜಗನ್ ಪವಾರ್ ಬೇಕಲ್ ಸ್ವಾಗತಿಸಿ ನಿರೂಪಿಸಿದರು. ಅಕಾಡೆಮಿ ಸದಸ್ಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು