9:11 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ಒಂದೇ ದಿನ 4 ಪ್ರತ್ಯೇಕ ಅಪಘಾತ: ಬ್ರೇಕ್ ವೈಫಲ್ಯದಿಂದ ಮನೆಯಂಗಳಕ್ಕೆ ಉರುಳಿ ಬಿದ್ದ ಕಾರು

20/07/2025, 11:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಒಂದೇ ದಿನ ನಾಲ್ಕು ಪ್ರತ್ಯೇಕ ಅಪಘಾತಗಳು ಸಂಭವಿಸಿದೆ. ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಶಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ.


ಬೆಂಗಳೂರಿನಿಂದ ಇರ್ಪು ಜಲಪಾತ ವೀಕ್ಷಿಸಿ ಕೇರಳದ ವೈನಾಡುಗೆ ತೆರಳುತ್ತಿದ್ದ ಈ ಕಾರು ಸೇವೆಂತ್ ಮೈಲ್ ಎನ್ನುವಲ್ಲಿ ಯತೀಶ್ ಎಂಬುವವರ ಮನೆಯ ಅಂಗಳಕ್ಕೆ ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. *ಬ್ರೇಕ್ ವೈಫಲ್ಯ ದಿಂದ ಅವಘಡ:* ಸೋಮವಾರಪೇಟೆ ತಾಲ್ಲೂಕಿನ ಕೊಗೆ ಕೋಡಿ ಎನ್ನುವಲ್ಲಿ ಬೆಂಗಳೂರಿನಿಂದ ಸೋಮವಾರಪೇಟೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಬ್ರೇಕ್ ವಿಫಲಗೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನು ತಾಳತ ಮನೆ ಬಳಿ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಸಹ ಸಾರಿಗೆ ಬಸ್ಸು ಬ್ರೇಕ್ ವಿಫಲಗೊಂಡು ಬರೆಗೆ ಗುದ್ದಿದ್ದು ಚಾಲಕನ ಸಮಯ ಪ್ರಜ್ಞೆ ಯಿಂದ ಪ್ರಪಾತಕ್ಕೆ ಬೀಳಬೇಕಿದ್ದ ಬಸ್ಸನ್ನು ತಡೆದಿದ್ದಾರೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಯಲ್ಲಿನ ಸಿಂಕೋನ ಸಮೀಪದ ತಿರುವಿನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಮಗುಚಿಕೊಂಡಿದ್ದು, ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು