10:48 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ಆರೋಪ: ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ವಿರುದ್ಧ ಎಫ್ ಐಆರ್

20/07/2025, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರು,
ವಾಟ್ಸಪ್ ಗ್ರೂಪ್ ಗಳಲ್ಲಿ ವೈಯಕ್ತಿಕ
ದ್ವೇಷದಿಂದ ಮಾನಹಾನಿಕಾರಕವಾಗಿ ನನ್ನನ್ನು ಚಿತ್ರಿಸಿ ತೇಜೋವಧೆ ಮಾಡಿದ್ದಾರೆ” ಎಂದು ಆರೋಪಿಸಿ ಬ್ರಹ್ಮಗಿರಿ ವಾರಪತ್ರಿಕೆ ಉಪ ಸಂಪಾದಕಿ ಉಳ್ಳಿಯಡ ಡಾಟಿ ಪೂವಯ್ಯ ಅವರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಗೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅಜ್ಜನಿಕಂಡ ಮಹೇಶ್ ನಾಚಯ್ಯರವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

*ದೂರಿನಲ್ಲಿ ಏನಿದೆ;?*
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರು, ವೈಯಕ್ತಿಕ ದ್ವೇಷ ಎಂಬಂತೆ ಮಾನಹಾನಿ ಮಾಡುವ ಉದ್ದೇಶದಿಂದ 06-07-2025 ರಂದು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಗುಂಪುಗಳಲ್ಲಿ ಹಾಗೂ ಬೇರೆಯವರ ವಾಟ್ಸಪ್ ನಂಬರ್ ಗಳಿಗೆ ಕೊಡವ ಭಾಷೆಯಲ್ಲಿ ತೀರಾ ಆಕ್ಷೇಪಣೆಕಾರಿಯಾಗಿಯೂ ಮತ್ತು ಆಘಾತಕಾರಿಯಾಗಿಯೂ ಟಿಪ್ಪಣಿ ಬರೆದು, ಸುಮಾರು ಇಪ್ಪತ್ತು ವರ್ಷದ ಹಿಂದೆ ಆಗಿ ಹೋದ ಘಟನೆಯನ್ನೂ, ಅಂದು ನ್ಯಾಯಾಲಯ ನಿರಪರಾಧಿ ಎಂದು ಘೋಷಿಸಿರುವುದನ್ನು ಲೆಕ್ಕಿಸದೆ ವ್ಯಾಪಕ ಪ್ರಚಾರ, ತೇಜೋವಧೆ ಮಾಡಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತೆ ಮಾಡಿರುತ್ತಾರೆ. ತಪ್ಪಿತಸ್ಥೆ ಅಲ್ಲವೆಂದು ಮಡಿಕೇರಿ ನ್ಯಾಯಾಲಯವು ತೀರ್ಪು ಹೊರಡಿಸಿರುವುದನ್ನು ಮರೆಮಾಚಿ
ಅಂದು ಕುತಂತ್ರಿಗಳು ಅರೋಪಿಸಿದ್ದ ಹಳೇ ವದಂತಿಗಳನ್ನು ಫೋಟೋ ಸಮೇತ ಪ್ರಕಟಿಸಿ ಎಲ್ಲ ಗ್ರೂಪ್ ಗಳಿಗೆ ಹರಡಿ ಆರೋಪ, ಅಸಹ್ಯಕರ ಲೈಂಗಿಕ ಛಾಯೆ ಬರುವಂತಹ ಶಬ್ದ ಬಳಸಿ ಆಕ್ಷೇಪವಾದ ವಾಕ್ಯಗಳನ್ನು ದುರುದ್ದೇಶದಿಂದ ಬಳಸಿ ಲೈಂಗಿಕವಾಗಿ ಬಣ್ಣದ ಟೀಕೆಗಳ ಪದಗಳನ್ನು ಉಪಯೋಗಿಸಿ ಕಿರುಕುಳ ಕೊಟ್ಟಿದ್ದು ಕಳಂಕಿತ ಮಹಿಳೆ ಎಂಬಂತೆ ಬಿಂಬಿಸಿ ಮಾನಸಿಕ ಆಘಾತ ಉಂಟು ಮಾಡಿರುತ್ತಾರೆ. ಇದರಿಂದ ಮಾನಸಿಕವಾಗಿ ಬಹಳಷ್ಟು ನೊಂದು ಕುಗ್ಗಿ ಹೋಗಿರುತ್ತೇನೆ. ಆದ್ದರಿಂದ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಡಾಟಿ ಪೂವಯ್ಯ ಅವರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.
ಇವರ ಪುಕಾರನ್ನು ದಾಖಲಿಸಿಕೊಂಡಿರುವ ಪೊಲೀಸರು, ಮಹೇಶ್ ನಾಚಯ್ಯರವರ ವಿರುದ್ಧ BNS 2023 ರ ಸೆಕ್ಷನ್ 75(1) (iv) ಅಡಿಯಲ್ಲಿ FIR ದಾಖಲಿಸಿಕೊಂಡು ಪ್ರಿನ್ಸ್ಪಲ್ ಸಿವಿಲ್ ಜಡ್ಜ್ (ಜೂನಿಯರ್ ಡಿವಿಷನ್ ಮತ್ತು JMFC ಮಡಿಕೇರಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು