8:12 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ: ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳು ಕೇರಳದಲ್ಲಿ ಬಂಧನ

22/07/2025, 16:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ “ಹನಿ ಟ್ರ್ಯಾಪ್” ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲೆಯ ನಾಪೋಕ್ಲು ಕುಂಜಿಲ ನಿವಾಸಿ ಸೈಫ್ ಮತ್ತು ಮಂಡ್ಯ ಮೂಲದ ಯುವತಿ ಕವನಾಳನ್ನು ಬಂಧಿಸಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಪಿರಿಯಾಪಟ್ಟಣದ ಕಂಪಲಾ ಪುರ ಬಟ್ಟೆ ಅಂಗಡಿ ಮಾಲೀಕ ಒಬ್ಬನನ್ನು ಹನಿ ಟ್ರ್ಯಾಪ್ ಮಾಡಿ ಲಕ್ಷಾಂತರ ಹಣ ವಸೂಲಿ ಮಾಡಿದ ನಂತರ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಬೈಲುಕುಪ್ಪೆ ಪೊಲೀಸ್ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಕೇರಳದ ಕಣ್ಣೂರು ಬಳಿ ಲಾಡ್ಜ್ ವೊಂದರಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹುಣಸೂರು ಪೊಲೀಸ್ ಠಾಣೆಯ ಪೇದೆ ಶಿವಣ್ಣ ಮತ್ತು ಮೂರ್ತಿ ಎಂಬುವವರನ್ನು ಈ ಹಿಂದೆ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಬಟ್ಟೆ ಅಂಗಡಿ ಮಾಲೀಕ ನಿಂದ 10 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಲಾಗಿತ್ತು. ಬಂಧಿತರನ್ನು ಮೈಸೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು