10:11 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ರಾಘವೇಶ್ವರ ಸ್ವಾಮೀಜಿ ಚಾತುರ್ಮಾಸ್ಯ: ಭಾಷಾ ಕಾಣಿಕೆ ಸಮರ್ಪಿಸಿ ಆದರ್ಶ ಮೆರೆದ ಭಂಡಾರಿ ಸಮಾಜದ ವಿದ್ಯಾರ್ಥಿ

23/07/2025, 17:57

ಗೋಕರ್ಣ(reporterkarnataka.com): ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಅಶೋಕೆಯಲ್ಲಿ ಕೈಗೊಂಡಿರುವ ಸ್ವಭಾಷಾ ಚಾತುರ್ಮಾಸ್ಯದ ವೇಳೆ ಭಂಡಾರಿ ಸಮಾಜದ ವಿದ್ಯಾರ್ಥಿಯೊಬ್ಬರು ಭಾಷಾ ಕಾಣಿಕೆ ಸಮರ್ಪಿಸಿದರು. ಯಾವುದೇ ಸಮಾಜ ಬಾಂಧವರು ಕನ್ನಡ ಮಾತನಾಡುವ ವೇಳೆ ಬಳಸಿದ ಪ್ರತಿ ಇಂಗ್ಲಿಷ್ ಶಬ್ದಕ್ಕೆ ತಪ್ಪುಕಾಣಿಕೆ ತೆಗೆದಿಟ್ಟು ಭಾಷಾಕಾಣಿಕೆ ರೂಪದಲ್ಲಿ ಸಮರ್ಪಿಸಿರುವುದು ಇದೇ ಮೊದಲು.
ಸ್ವಭಾಷೆಯ ಬಗ್ಗೆ ಅರಿವು ಮತ್ತು ಆತ್ಮಾಭಿಮಾನ ಮೂಡಿಸುವ ಉದ್ದೇಶದಿಂದ ಚಾತುರ್ಮಾಸ್ಯ ಕೈಗೊಳ್ಳುವ ಪೂರ್ವಭಾವಿಯಾಗಿ ಶ್ರೀಗಳು, ಕನ್ನಡದಲ್ಲಿ ಇತರ ಭಾಷೆಗಳನ್ನು ಮಿಶ್ರ ಮಾಡದಂತೆ ಕರೆ ನೀಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಬಿಎಂಶ್ರೀಯವರು ಕನ್ನಡ ಉಳಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮವನ್ನು ಉಲ್ಲೇಖಿಸಿದ ಶ್ರೀಗಳು, ನಾವು ಕನ್ನಡ ಮಾತನಾಡುವ ವೇಳೆ ಬಳಸುವ ಪ್ರತಿಯೊಂದು ಇಂಗ್ಲಿಷ್ ಪದಕ್ಕೆ ಒಂದು ನಿರ್ದಿಷ್ಟ ದಂಡಮೊತ್ತವನ್ನು ತೆಗೆದಿಟ್ಟು ಸಮರ್ಪಿಸುವಂತೆ ಸಲಹೆ ಮಾಡಿದ್ದರು. ಆ ಮೂಲಕ ಸ್ವಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಕೈಜೋಡಿಸೋಣ ಎಂದು ಕರೆ ನೀಡಿದ್ದರು.
ಶ್ರೀಗಳು ಬೆಂಗಳೂರಿನಲ್ಲಿ ನೀಡಿದ ಆಶೀರ್ವಚನದ ಯೂ-ಟ್ಯೂಬ್ ಅವತರಣಿಕೆಯನ್ನು ವೀಕ್ಷಿಸಿದ ಕುಮಟಾ ಎ.ವಿ.ಬಾಳಿಗಾ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ ಶ್ರೀಧರ ಮಂಜುನಾಥ ಭಂಡಾರಿ, ಆ ಬಳಿಕ ಕನ್ನಡದಲ್ಲೇ ಮಾತನಾಡುವ ಪಣತೊಟ್ಟು, ಮಾತನಾಡುವ ವೇಳೆ ಗಮನಕ್ಕೆ ಬಂದ ಇಂಗ್ಲಿಷ್ ಪದಗಳಿಗೆ ನಿರ್ದಿಷ್ಟ ಮೊತ್ತದ ತಪ್ಪುಕಾಣಿಕೆ ತೆಗೆದಿಟ್ಟು, ಮಂಗಳವಾರ ಸಮಾಜದ ಸ್ವರ್ಣಪಾದುಕೆ ಪೂಜೆ ಸಂದರ್ಭದಲ್ಲಿ ಭಾಷಾಕಾಣಿಕೆ ಸಮರ್ಪಿಸಿ ಆದರ್ಶ ಮೆರೆದರು.
ಸ್ವರ್ಣಪಾದುಕೆ ಪೂಜೆ ನೆರವೇರಿಸಿದ ಭಂಡಾರಿ ಸಮಾಜದ ಎಲ್ಲ ಮನೆಗಳಿಗೆ ವಿತರಿಸಲು ಶ್ರೀಗಳು ಸಮಾಜದ ಮುಖಂಡರಿಗೆ ಸಮಷ್ಟಿ ಮಂತ್ರಾಕ್ಷತೆ ಅನುಗ್ರಹಿಸಿದರು. ಭಂಡಾರಿ ಸಮಾಜದ ಅಧ್ಯಕ್ಷ ಶಿವ ಭಂಡಾರಿ, ಉಪಾಧ್ಯಕ್ಷ ನಾರಾಯಣ ಎಸ್. ಭಂಡಾರಿ, ವಿನಾಯಕ ಎಂ.ಭಂಡಾರಿ, ಹರಿಹರ ಎಸ್.ಭಂಡಾರಿ, ರವಿ ಎಂ.ಭಂಡಾರಿ ಮತ್ತಿತರರು ನೇತೃತ್ವ ವಹಿಸಿದ್ದರು. ಸರ್ವ ಸಮಾಜಗಳ ಸಂಯೋಜಕರಾದ ಕೆ.ಎನ್.ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ಸಂದರ್ಭದಲ್ಲಿ ಮಂಗಳವಾರ ಶತರುದ್ರ ಮತ್ತು ಸರ್ಪಸೂಕ್ತ ಹವನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು