2:46 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವ ವಿದ್ಯಾನಿಲಯದ 6ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟ

23/07/2025, 18:02

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ 6ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟವಾಗಿದೆ.
ವಿಶ್ವವಿದ್ಯಾನಿಲಯವು ಜೂನ್ ಜುಲೈ 2025 ರಲ್ಲಿ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ ಚತುರ್ಥ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳು ಇತ್ತೀಚೆಗೆ ಮುಗಿದಿದ್ದು, ಈ ಪರೀಕ್ಷೆಗಳ ವಿವಿದ ವಿಷಯಗಳ ಮೌಲ್ಯಮಾಪನ ಕಾರ್ಯವು ಜು.2 ರಂದು ಆರಂಭಗೊಂಡು ನಾಲ್ಕು ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯ ಮಾಪನ ಕಾರ್ಯವು ನಡೆಯುತ್ತಿದೆ.ಪದವಿಯ ಆರನೇ ಸೆಮಿಸ್ಟರ್ ನ ಮೌಲ್ಯಮಾಪನ ಕಾರ್ಯವು ಜು.19 ರಂದು ಪೂರ್ಣಗೊಂಡಿದ್ದು‌ ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ವ್ಯಾಸಾಂಗಕ್ಕಾಗಿ ಹಾಗೂ ಉದ್ಯೋಗದ ಹಿತದೃಷ್ಟಿಯಿಂದ ಮೌಲ್ಯಮಾಪನ ನಡೆದ ಮೂರೇ ದಿನಗಳಲ್ಲಿ 15, 534 ವಿದ್ಯಾರ್ಥಿಗಳ ಫಲಿತಾಂಶವನ್ನು ಜು.22 ರಂದು ಮಂಗಳವಾರ ಮಂಗಳೂರು ವಿವಿಯ UUCMS (ಯುಯುಸಿಎಮ್ ಎಸ್ ) ನ ಅಧಿಕೃತ ವೆಬ್ಸೈಟ್ www.uucms.karnataka.gov.in ನಲ್ಲಿ ಪ್ರಕಟಿಸಿದೆ.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು ಮಂಗಳೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಫಲಿತಾಂಶದ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಸಚಿವ ಕೆ‌.ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ ಹೆಚ್, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ , ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಮೌಲ್ಯಮಾಪನ ಪೂರ್ಣಗೊಳಿಸಿದ ಬಿಎಸ್ಸಿ, ಬಿಕಾಂ, ಬಿಎಸ್ ಡಬ್ಲೂ, ಬಿಸಿಎ, ಬಿಬಿಎ, ಬಿಎಸ್ಸಿ( ಎಫ್ ಎನ್ ಡಿ) ಬಿಎಸ್ಸಿ(ಎನ್ಯಿಮೇಶನ್ ಮತ್ತು ವಿಜ್ಯುವಲ್ ಇಫೆಕ್ಟ್, ಬಿಎಸ್ಸಿ (ಫುಡ್ ಟೆಕ್ನಾಲಜಿ), ಬಿಎಸ್ಸಿ ( ಹೋಮ್ ಸೈಯನ್ಸ್), ಬಿ.ಎ( ಎಚ್ ಆರ್ ಡಿ) ಬಿಎಸ್ಸಿ ( ಫ್ಯಾಶನ್ ಡಿಸೈನ್), ಬಿಎಸ್ಸಿ(ಐಡಿ&ಡಿ), ಬಿಹೆಚ್ ಎಂ, ಬಿವಿಎ ಕಾರ್ಯಕ್ರಮಗಳ 6ನೆ ಸೆಮಿಸ್ಟರ್ ನ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಉಳಿದಂತೆ ಎಲ್ಲಾ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಗಳ ಹಾಗೂ ಬಿಎಚ್ ಎಂ 8ನೇ ಸೆಮಿಸ್ಟರ್, ಬಿಎ (ಎಸ್ ಎಲ್ ಪಿ), ಹಾಗೂ ಎನ್ಇಪಿ ಅಲ್ಲದ (non NEP) ಕಾರ್ಯಕ್ರಮಗಳ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ ಹೆಚ್ ಅವರು ತಿಳಿಸಿದ್ದಾರೆ.

ಮಂಗಳೂರು ವಿವಿಯು ಈ ಬಾರಿ ಮೌಲ್ಯಮಾಪನ ಕೇಂದ್ರದಲ್ಲಿಯೇ ಅಂಕತಃಖ್ತೀಕರಣ ದಾಖಲಿಸುವ ಪ್ರಕ್ರಿಯೆಯನ್ನು ಆನ್ ಲೈನ್ ವ್ಯವಸ್ಥೆಯ ಮೂಲಕ ಸಂಪೂರ್ಣವಾಗಿ ಗಣಕೀಕರಣಗೊಳಿಸಿದ್ದರಿಂದ ಮೌಲ್ಯಮಾಪನ ನಡೆಯುತ್ತಿರುವಾಗಲೇ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯವಾಗಿದೆ. ಇದಕ್ಕೆ ಪೂರಕವಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಂಯೋಜಕರು ಪರೀಕ್ಷಾ ಮಂಡಳಿ ಅಧ್ಯಕ್ಷರು, ಮೌಲ್ಯಮಾಪಕರು , ಶಿಕ್ಷಕೇತರ ಸಿಬ್ಬಂದಿಗಳ ಪೂರ್ಣಪ್ರಮಾಣದ ಸಹಕಾರದಿಂದ ನಿಗದಿತ ಸಮಯದಲ್ಲಿ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಅತ್ಯಂತ ಕಡಿಮೆ ಸಮಯದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯವಾಗಿದೆ. ಪರೀಕ್ಷಾ ಫಲಿತಾಂಶಗಳಿಗೆ ಸಂಬಂಧಿಸಿ, ಮರುಮೌಲ್ಯಮಾಪನಕ್ಕೆ ( ಉಳಿದ ಎಲ್ಲಾ ಫಲಿತಾಂಶ ಪ್ರಕಟವಾದ ಬಳಿಕ): ಅರ್ಜಿ ಆಹ್ವಾನಿಸಿ ಸದ್ಯದಲ್ಲಿಯೇ ವಿಶ್ವವಿದ್ಯಾಲಯದಿಂದ ಪ್ರಕಟಣೆ ಹೊರಡಿಸಲಾಗುವುದು. ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ಶುಲ್ಕ ಪಾವತಿಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು