10:31 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಸಾಮಾನ್ಯ ವರ್ಗಕ್ಕೆ ಸೇರ್ಪಡೆ: ದೈವಜ್ಞ ಬ್ರಾಹ್ಮಣ ಸಮುದಾಯದಿಂದ ಶಾಸಕ ವೇದವ್ಯಾಸ ಕಾಮತ್ ಗೆ ಮನವಿ

23/07/2025, 20:50

ಮಂಗಳೂರು(reporterkarnataka.com):ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ‌ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಮುದಾಯದ ಮುಖಂಡರ ಅಹವಾಲನ್ನು ಆಲಿಸಿದ ಶಾಸಕರು, ಇದುವರೆಗೂ ದೈವಜ್ಞ ಬ್ರಾಹ್ಮಣ ಸಮಾಜವು ಸಾಮಾಜಿಕವಾಗಿ ಒಬಿಸಿ 2ಎ ಪ್ರವರ್ಗದಲ್ಲಿ ಇತ್ತು. ಅದೇ ರೀತಿಯಲ್ಲಿ ಜಾತಿ ಪ್ರಮಾಣ ಪತ್ರವನ್ನೂ ಸಹ ಪಡೆಯಲಾಗಿದೆ. ಆದರೂ ರಾಜ್ಯ ಕಾಂಗ್ರೆಸ್ ಸರ್ಕಾರವು ಏಕಪಕ್ಷೀಯವಾಗಿ 2025 ರ ಹೊಸ ದಾಖಲಾತಿ ಪ್ರಕ್ರಿಯೆಯಲ್ಲಿ ದೈವಜ್ಞ ಬ್ರಾಹ್ಮಣ ಸಮುದಾಯವನ್ನು (519) ಓಬಿಸಿಯಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿದೆ. ಯಾವ ಆಧಾರದಲ್ಲಿ ಹೀಗೆ ಮಾಡಲಾಗಿದೆ ಎಂಬ ಸಮಾಜದ ಮುಖಂಡರ ಪ್ರಶ್ನೆ ನ್ಯಾಯಯುತವಾದುದು. ಈ ಬಗ್ಗೆ ಖಂಡಿತವಾಗಿಯೂ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ಗಮನವನ್ನು ಸೆಳೆಯುತ್ತೇನೆ. ಹೊಸ ದಾಖಲಾತಿ ಪ್ರಕ್ರಿಯೆಯಲ್ಲಿನ ಲೋಪದೋಷವನ್ನು ಸರಿಪಡಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರವೀಂದ್ರ ಜಿ. ಗೋಕರ್ಣಕರ್, ಕಾರ್ಯದರ್ಶಿ ದರ್ಶನ್ ಸಿ.ಶೇಟ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಜಿ. ಶೇಟ್, ಚೇತನ್ ಶೇಟ್, ಅರುಣ್ ಜಿ ಶೇಟ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು