11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ

24/07/2025, 10:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ದಕ್ಷಿಣ ಕೊಡಗಿನಲ್ಲಿ ರೈತರ ಜಾನುವಾರುಗಳ ಮೇಲೆ ಹುಳಿಯು ನಿರಂತರ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತಿಗೋಡು ಕ್ಯಾಂಪ್ ನಿಂದ ಭೀಮಾ ಮತ್ತು ಬಳ್ಳೆ ಕ್ಯಾಂಪ್ ನಿಂದ ಮಹೇಂದ್ರ ಸಾಕಾನೆಗಳನ್ನು ಬಳಸಿಕೊಂಡು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಹುಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಂತೆ ವಿವಿಧ ತಂಡಗಳು ಕಾರ್ಯಾಚರಣೆ ನಡೆಸಿದರೂ ಹುಲಿಯ ಗುರುತು ಹಾಗೂ ಚಲನವಲನ ಪತ್ತೆ ಸಾಧ್ಯವಾಗಿಲ್ಲ. ವಿವಿಧೆಡೆ ಕ್ಯಾಮರಾಗಳನ್ನು ಅಳವಡಿಸಿ ಹುಲಿಯ ಚಿತ್ರ ಸೆರೆಗೆ ಪ್ರಯತ್ನ ನಡೆಯಿತಾದರೂ ಪ್ರಯೋಜನವಾಗಿಲ್ಲ. ಇದೀಗ ಸಾಕಾನೆಗಳ ಕಾರ್ಯಾಚರಣೆಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಎಂದಿನಂತೆ 11ನೇ ದಿನ ಅರಣ್ಯ ಸಿಬ್ಬಂದಿಗಳು ಕೂoಬಿoಗ್ ಮುಂದುವರೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು