5:24 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ

24/07/2025, 10:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ದಕ್ಷಿಣ ಕೊಡಗಿನಲ್ಲಿ ರೈತರ ಜಾನುವಾರುಗಳ ಮೇಲೆ ಹುಳಿಯು ನಿರಂತರ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತಿಗೋಡು ಕ್ಯಾಂಪ್ ನಿಂದ ಭೀಮಾ ಮತ್ತು ಬಳ್ಳೆ ಕ್ಯಾಂಪ್ ನಿಂದ ಮಹೇಂದ್ರ ಸಾಕಾನೆಗಳನ್ನು ಬಳಸಿಕೊಂಡು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಹುಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಂತೆ ವಿವಿಧ ತಂಡಗಳು ಕಾರ್ಯಾಚರಣೆ ನಡೆಸಿದರೂ ಹುಲಿಯ ಗುರುತು ಹಾಗೂ ಚಲನವಲನ ಪತ್ತೆ ಸಾಧ್ಯವಾಗಿಲ್ಲ. ವಿವಿಧೆಡೆ ಕ್ಯಾಮರಾಗಳನ್ನು ಅಳವಡಿಸಿ ಹುಲಿಯ ಚಿತ್ರ ಸೆರೆಗೆ ಪ್ರಯತ್ನ ನಡೆಯಿತಾದರೂ ಪ್ರಯೋಜನವಾಗಿಲ್ಲ. ಇದೀಗ ಸಾಕಾನೆಗಳ ಕಾರ್ಯಾಚರಣೆಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಎಂದಿನಂತೆ 11ನೇ ದಿನ ಅರಣ್ಯ ಸಿಬ್ಬಂದಿಗಳು ಕೂoಬಿoಗ್ ಮುಂದುವರೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು