3:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು