10:15 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದೇವರಕೊಲ್ಲಿ ಬಳಿ ಲಾರಿ- ಕಾರು ಭೀಕರ ಅಪಘಾತ: ಗೋಣಿಕೊಪ್ಪದ 4 ಮಂದಿ ಯುವಕರು ದಾರುಣ ಸಾವು

25/07/2025, 17:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುಳ್ಯ ಸಮೀಪದ
ಸಂಪಾಜೆ ಬಳಿಯ ದೇವರಕೊಲ್ಲಿಯಲ್ಲಿ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಮಂದಿ ಮೃತಪಟ್ಟಿದ್ದಾರೆ.
ಸಾವನ್ಬಪ್ಪಿದವರನ್ನು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಎಂದು ಗುರುತಿಸಲಾಗಿದೆ. ಇವರೆಲ್ಲ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ 12.50 ಗಂಟೆ ವೇಳೆಗೆ ಈ ದುರ್ಘನೆ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯದ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಅಪಘಾತ ಸಂಭವಿಸಿದೆ.


ಅಪಘಾತದ ತೀವ್ರತೆಗೆ ನಿಹಾದ್ ಹಾಗೂ ರಿಜ್ವಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಕೀಬ್ ಮತ್ತು ರಿಶು ಸುಳ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಕೊನೆಯುಸಿರೆಳೆದಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು