7:35 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ ಜೀಪ್ ಪತ್ತೆ; ಚಾಲಕನ ಕುರುಹು ಅಲಭ್ಯ

25/07/2025, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕಿನ ಕೊಳಮಾಗೆಯಲ್ಲಿ ಜೀಪೊಂದು ಭದ್ರಾ ನದಿಗೆ ಬಿದ್ದು ಚಾಲಕ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸತತ 23 ತಾಸುಗಳ ಕಾರ್ಯಾಚರಣೆ ಬಳಿಕ ಜೀಪ್ ಪತ್ತೆಯಾಗಿದೆ. ಆದರೆ, ಜೀಪ್ ಚಾಲಕನ ಯಾವುದೇ ಕುರುಹು ಪತ್ತೆಯಾಗಿಲ್ಲ.
ಭದ್ರಾ ನದಿಯಲ್ಲಿ ಪತ್ತೆಯಾದ ಪಿಕಪ್ ಜೀಪ್ ನಿನ್ನೆ ಭದ್ರಾ ನದಿಗೆ ಜೀಪ್ ಉರುಳಿದ ಪರಿಣಾಮ ಅವರ ಚಾಲಕ 23ರ ಹರೆಯದ ಶಮಂತ್ ನೀರು ಪಾಲಾಗಿದ್ದ. ಸುದ್ದಿ ತಿಳಿದು ಆತನ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಸತತ 23 ತಾಸುಗಳ ಶೋಧ ಕಾರ್ಯಾಚರಣೆ ಬಳಿಕ
ಜೀಪನ್ನು ಮೇಲಕ್ಕೆತ್ತಲಾಗಿದೆ.
ಆದರೆ ಜೀಪ್ ನಲ್ಲಿ ಚಾಲಕ ಶಮಂತ್‌ ಕುರುಹು ಪತ್ತೆಯಾಗಿಲ್ಲ. ಶಮಂತ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ನಿನ್ನೆ ಸಂಜೆ ತಾಯಿ ಹಾಗೂ ಕಾರ್ಮಿಕರನ್ನ ಕರೆದುಕೊಂಡು ಬರಲು ವೇಳೆ ಈ ದುರ್ಘಟನೆ ನಡೆದಿತ್ತು.ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಜೀಪ್ ಉರುಳಿತ್ತು.ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು