7:37 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ

25/07/2025, 20:10

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ.
ಬಂಟ್ವಾಳ ತಾಲೂಕಿನ‌ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವಾಸ್ತವ್ಯದ ಮನೆಯ ಮೇಲೆ ಮರ ಬಿದ್ದು ಹಾನಿಗೀಡಾಗಿದೆ.


ಕಾವಳಮುಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಗೊಳಗಾಗಿದೆ.
ದೇವಸ್ಯ ಪಡೂರು ಗ್ರಾಮದ ನುರ್ತಾಡಿ ನಿವಾಸಿ ಯಮುನಾ ಕೋಂ ರುಕ್ಮಯ ಪೂಜಾರಿ ರವರ ಮನೆಯ ಹಿಂಭಾಗ ದ ಗೋಡೆ ಕುಸಿತವಾಗಿ ಹಾನಿಯುಂಟಾಗಿದೆ.ಕೇಪು ಗ್ರಾಮದ ಗುತ್ತುದಡ್ಕ ಎಂಬಲ್ಲಿ ನಾರಾಯಣ ಎಂಬವರ ಮನೆಯ ಮುಂಭಾಗ ಅಳವಡಿಸಿರುವ ಶೀಟ್ ಛಾವಣಿ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಯಾವುದೇ ಪ್ರಾಣಹಾನಿ ಸಭವಿಸಿಲ್ಲ. ಪಿಲಾತಬೆಟ್ಟು ಗ್ರಾಮದ ಕವಿತಾ ಅವರ ಮನೆಗೆ ಇಂದು ಬೆಳಿಗ್ಗೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು