8:52 PM Saturday26 - July 2025
ಬ್ರೇಕಿಂಗ್ ನ್ಯೂಸ್
BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ

25/07/2025, 20:10

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ.
ಬಂಟ್ವಾಳ ತಾಲೂಕಿನ‌ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವಾಸ್ತವ್ಯದ ಮನೆಯ ಮೇಲೆ ಮರ ಬಿದ್ದು ಹಾನಿಗೀಡಾಗಿದೆ.


ಕಾವಳಮುಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಗೊಳಗಾಗಿದೆ.
ದೇವಸ್ಯ ಪಡೂರು ಗ್ರಾಮದ ನುರ್ತಾಡಿ ನಿವಾಸಿ ಯಮುನಾ ಕೋಂ ರುಕ್ಮಯ ಪೂಜಾರಿ ರವರ ಮನೆಯ ಹಿಂಭಾಗ ದ ಗೋಡೆ ಕುಸಿತವಾಗಿ ಹಾನಿಯುಂಟಾಗಿದೆ.ಕೇಪು ಗ್ರಾಮದ ಗುತ್ತುದಡ್ಕ ಎಂಬಲ್ಲಿ ನಾರಾಯಣ ಎಂಬವರ ಮನೆಯ ಮುಂಭಾಗ ಅಳವಡಿಸಿರುವ ಶೀಟ್ ಛಾವಣಿ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಯಾವುದೇ ಪ್ರಾಣಹಾನಿ ಸಭವಿಸಿಲ್ಲ. ಪಿಲಾತಬೆಟ್ಟು ಗ್ರಾಮದ ಕವಿತಾ ಅವರ ಮನೆಗೆ ಇಂದು ಬೆಳಿಗ್ಗೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು