11:08 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ

25/07/2025, 20:10

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ.
ಬಂಟ್ವಾಳ ತಾಲೂಕಿನ‌ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವಾಸ್ತವ್ಯದ ಮನೆಯ ಮೇಲೆ ಮರ ಬಿದ್ದು ಹಾನಿಗೀಡಾಗಿದೆ.


ಕಾವಳಮುಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಗೊಳಗಾಗಿದೆ.
ದೇವಸ್ಯ ಪಡೂರು ಗ್ರಾಮದ ನುರ್ತಾಡಿ ನಿವಾಸಿ ಯಮುನಾ ಕೋಂ ರುಕ್ಮಯ ಪೂಜಾರಿ ರವರ ಮನೆಯ ಹಿಂಭಾಗ ದ ಗೋಡೆ ಕುಸಿತವಾಗಿ ಹಾನಿಯುಂಟಾಗಿದೆ.ಕೇಪು ಗ್ರಾಮದ ಗುತ್ತುದಡ್ಕ ಎಂಬಲ್ಲಿ ನಾರಾಯಣ ಎಂಬವರ ಮನೆಯ ಮುಂಭಾಗ ಅಳವಡಿಸಿರುವ ಶೀಟ್ ಛಾವಣಿ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಯಾವುದೇ ಪ್ರಾಣಹಾನಿ ಸಭವಿಸಿಲ್ಲ. ಪಿಲಾತಬೆಟ್ಟು ಗ್ರಾಮದ ಕವಿತಾ ಅವರ ಮನೆಗೆ ಇಂದು ಬೆಳಿಗ್ಗೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು