7:45 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಗಣಪತಿ ಭಟ್ ನೆಲ್ಲಿತೀರ್ಥರಿಗೆ ವಿಪ್ರಭೂಷಣ ಪ್ರಶಸ್ತಿ: 27ರಂದು ಅಶ್ವತ್ಥಪುರದಲ್ಲಿ ಪ್ರದಾನ

25/07/2025, 20:54

ಮಂಗಳೂರು(reporterkarnataka.com): ಅಶ್ವತ್ಥಪುರ ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್‌ ವತಿಯಿಂದ ನೀಡಲಾಗುವ ವಿಪ್ರಭೂಷಣ ಪ್ರಶಸ್ತಿಗೆ ಈ ಬಾರಿ ವೇ.ಮೂ.ಶ್ರೀ ಗಣಪತಿ ಭಟ್ ನೆಲ್ಲಿತೀರ್ಥ ಆಯ್ಕೆಯಾಗಿದ್ದಾರೆ.
ಶ್ರೀ ಗಣಪತಿ ಭಟ್ ಅವರು
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಸೋಮನಾಥೇಶ್ವರ ಗುಹಾಲಯ ನೆಲ್ಲಿತೀರ್ಥ ಇಲ್ಲಿ ಕಳೆದ ಮೂವತ್ತು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜು. 27ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಸಾವಿತ್ರಿ ಸಭಾ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿ ಕೆ.ವೈ.ಲಕ್ಷ್ಮೀ ತಿಳಿಸಿದ್ದಾರೆ.
ಅಶ್ವತ್ಥಪುರ ಕ್ಷೇತ್ರ ಆಡಳಿತ ಮೋಕ್ತೇಸರ ಕೃಷ್ಣಮೂರ್ತಿ ವಿ.ಎ., ಬೆಂಗಳೂರಿನ ಯುವ ಉದ್ಯಮಿ ಹಾಗೂ ಆರ್ಥಿಕ ಸಲಹೆಗಾರ ಶ್ರೀಕಾಂತ್ ಎಂ.ಜಿ., ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಲ್. ದಿನೇಶ್ ಕುಮಾರ್ ಭಾಗವಹಿಸುವರು.
*ಗೌರವ ಸನ್ಮಾನ:*
ಇದೇ ಸಂದರ್ಭ ವೇ.ಮೂ.ಪ್ರಭಾಕರ ಭಟ್ ಕಂಚಿಬೈಲು ,ಮಾಯಣ ಗೋಪಾಲಕೃಷ್ಣ ರಾವ್ ಉಡುಪಿ, ಶಂಕರ ರಾವ್ ವರ್ಕು, ಹಾಗೂ ಸದಾಶಿವ ರಾವ್ ನೆಲ್ಲಿಮಾರು ಇವರಿಗೆ ಗೌರವ ಸನ್ಮಾನ ನಡೆಯಲಿದೆ.
*ಯಕ್ಷಗಾನ ಪ್ರದರ್ಶನ:*
ಬಳಿಕ ಭರತ್ ರಾಜ್ ಪರ್ಕಳ ನಿರ್ದೇಶನದಲ್ಲಿ ಸೃಷ್ಟಿ ಕಲಾ ವಿದ್ಯಾಲಯ ಬೆಂಗಳೂರು ತಂಡದಿಂದ ‘ಅಭಿಮನ್ಯು ಕಾಳಗ’ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು