12:41 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಗಣಪತಿ ಭಟ್ ನೆಲ್ಲಿತೀರ್ಥರಿಗೆ ವಿಪ್ರಭೂಷಣ ಪ್ರಶಸ್ತಿ: 27ರಂದು ಅಶ್ವತ್ಥಪುರದಲ್ಲಿ ಪ್ರದಾನ

25/07/2025, 20:54

ಮಂಗಳೂರು(reporterkarnataka.com): ಅಶ್ವತ್ಥಪುರ ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್‌ ವತಿಯಿಂದ ನೀಡಲಾಗುವ ವಿಪ್ರಭೂಷಣ ಪ್ರಶಸ್ತಿಗೆ ಈ ಬಾರಿ ವೇ.ಮೂ.ಶ್ರೀ ಗಣಪತಿ ಭಟ್ ನೆಲ್ಲಿತೀರ್ಥ ಆಯ್ಕೆಯಾಗಿದ್ದಾರೆ.
ಶ್ರೀ ಗಣಪತಿ ಭಟ್ ಅವರು
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಸೋಮನಾಥೇಶ್ವರ ಗುಹಾಲಯ ನೆಲ್ಲಿತೀರ್ಥ ಇಲ್ಲಿ ಕಳೆದ ಮೂವತ್ತು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜು. 27ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಸಾವಿತ್ರಿ ಸಭಾ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿ ಕೆ.ವೈ.ಲಕ್ಷ್ಮೀ ತಿಳಿಸಿದ್ದಾರೆ.
ಅಶ್ವತ್ಥಪುರ ಕ್ಷೇತ್ರ ಆಡಳಿತ ಮೋಕ್ತೇಸರ ಕೃಷ್ಣಮೂರ್ತಿ ವಿ.ಎ., ಬೆಂಗಳೂರಿನ ಯುವ ಉದ್ಯಮಿ ಹಾಗೂ ಆರ್ಥಿಕ ಸಲಹೆಗಾರ ಶ್ರೀಕಾಂತ್ ಎಂ.ಜಿ., ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಲ್. ದಿನೇಶ್ ಕುಮಾರ್ ಭಾಗವಹಿಸುವರು.
*ಗೌರವ ಸನ್ಮಾನ:*
ಇದೇ ಸಂದರ್ಭ ವೇ.ಮೂ.ಪ್ರಭಾಕರ ಭಟ್ ಕಂಚಿಬೈಲು ,ಮಾಯಣ ಗೋಪಾಲಕೃಷ್ಣ ರಾವ್ ಉಡುಪಿ, ಶಂಕರ ರಾವ್ ವರ್ಕು, ಹಾಗೂ ಸದಾಶಿವ ರಾವ್ ನೆಲ್ಲಿಮಾರು ಇವರಿಗೆ ಗೌರವ ಸನ್ಮಾನ ನಡೆಯಲಿದೆ.
*ಯಕ್ಷಗಾನ ಪ್ರದರ್ಶನ:*
ಬಳಿಕ ಭರತ್ ರಾಜ್ ಪರ್ಕಳ ನಿರ್ದೇಶನದಲ್ಲಿ ಸೃಷ್ಟಿ ಕಲಾ ವಿದ್ಯಾಲಯ ಬೆಂಗಳೂರು ತಂಡದಿಂದ ‘ಅಭಿಮನ್ಯು ಕಾಳಗ’ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು