4:11 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ಭೇಟಿ

26/07/2025, 22:33

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ವಿಚಾರವಾಗಿ ಪರಿಶೀಲನೆ ನಡೆಸಿದರು.
ಸೊಪ್ಪುಗುಡ್ಡೆಯಲ್ಲಿರುವ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಸ್ವಚ್ಛತೆ ಹಾಗೂ ಮಕ್ಕಳಿಗೆ ಕುಡಿಯುವನೀರಿನ ವಿಷಯವಾಗಿ ಭೇಟಿ ನೀಡಿ ಕುಡಿಯುವ ನೀರು ಹಾಗೂ ಸ್ನಾನಕ್ಕೆ ಬಿಸಿ ನೀರು ಮೂರು ತಿಂಗಳುಗಳಿಂದ ಬರುತ್ತಿಲ್ಲ ಎಂಬುದಾಗಿ ತಿಳಿದು ಹಿರಿಯ ಹಾಸ್ಟೆಲ್ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಮಲೆನಾಡಿನ ತೀರ್ಥಹಳ್ಳಿ ಭಾಗದಲ್ಲಿ ಮಳೆ ಸಿಕ್ಕಾಪಟ್ಟೆ ಇರುವುದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂಬ ವಿಷಯ ಪ್ರಸ್ತಾಪ ಮಾಡಿದರು.


ಮಳೆಗಾಲದ ಸಂದರ್ಭದಲ್ಲಿ ತಣ್ಣೀರು ಸ್ನಾನ ಮಾಡಲು ಆಗುವುದಿಲ್ಲ ಹಾಗೆ ಅದಕ್ಕೆ ಬೇಕಾಗುವ ವ್ಯವಸ್ಥೆ ಕೂಡಲೇ ಮಾಡಿಸಬೇಕು ಎಂದು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಆದಷ್ಟು ಬೇಗ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ಸೌಲಭ್ಯ ಮಾಡಿಸಿಕೊಡಬೇಕು ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತ್ ಉಲ್ಲಾ ಆಸಾದಿ ತಿಳಿಸಿದರು.
ಈ ವೇಳೆ ಉಪಾಧ್ಯಕ್ಷರಾದ ಗೀತಾ ರಮೇಶ್, ಆರೋಗ್ಯ ಅಧಿಕಾರ ಜೆ ಪ್ರಕಾಶ್ ಹಾಗೂ ಇತರ ಸಿಬ್ಬಂದಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು