10:06 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ

26/07/2025, 22:38

ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗಿದೆ.
ಮಳೆಯ ಅಬ್ಬರದ ನಡುವೆಯೂ ಸರಿಪಡಿಸುತ್ತಿದ್ದು ಒಂದೆಡೆ ಸರಿಯಾದರೆ ಮತ್ತೊಂದೆಡೆ ಮರ ವಿದ್ಯುತ್ ತಂತಿಗಳ ಮೇಲೆ ಬೀಳುತ್ತಿರುವುದರಿಂದ ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸಲು ಕಷ್ಟವಾಗುತ್ತಿದೆ.


ಭಾರೀ ಮಳೆ ಗಾಳಿಗೆ ವಿದ್ಯುತ್ ತಂತಿಗಳ ಮೇಲೆ ಮರಗಳು ಬೀಳುತ್ತಿದ್ದು ಇದನ್ನು ಪುನಃ ಸ್ಥಾಪಿಸಲು ಭಾರೀ ಮಳೆ ಗಾಳಿಯು ಅಡ್ಡಿಯಾಗುತ್ತಿದೆ.
ನಮ್ಮಲ್ಲಿ ಸಿಬ್ಬಂದಿಗಳು ಕೂಡ ಕಡಿಮೆ ಇದ್ದರೂ ಮಳೆ ಗಾಳಿ ಲೆಕ್ಕಿಸದೆ ಹರಸಾಹಸ ಪಟ್ಟು ಜಯಪುರದವರೆಗೂ ಸರಿಪಡಿಸಿದ್ದೇವೆ.
ಗ್ರಾಮೀಣ ಭಾಗಗಳಿಗೆ ಇಂದು ವಿದ್ಯುತ್ ಸಂಪರ್ಕಿಸುವುದು ಕಷ್ಟವಾಗಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಿಕೊಳ್ಳುತ್ತೇನೆ ಎಂದು
ಜಯಪುರ ಸಹಾಯಕ ಇಂಜಿನಿಯರ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು