11:28 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Raichuru | ಮಸ್ಕಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ: ಯೋಧರಿಗೆ ಸನ್ಮಾನ

26/07/2025, 22:52

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಮಸ್ಕಿ ಪ್ರಭುವಿತಂ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯೋತ್ಸವ ದಿವಸ್ ಕಾರ್ಯಕ್ರಮವನ್ನು ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸೈನ್ಯದಲ್ಲಿ ಅಂದು ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸೋಣ. ಕಾರ್ಗಿಲ್ ವಿಜಯೋತ್ಸವ ದಿನ
ದೇಶದ ಸಂರಕ್ಷಣೆಗೆ ಪ್ರಾಣವನ್ನೇ ಅರ್ಪಿಸಿದ ವೀರ ಯೋಧರಿಗೆ ಭಕ್ತಿಪೂರ್ವಕ ನಮನಗಳು ಎಂದರು.
1999 ರ ಕಾರ್ಗಿಲ್ ಯುದ್ಧವು ಭಾರತದ ಇತಿಹಾಸದಲ್ಲೇ ಅತ್ಯಂತ ಸಾಹಸಿಕ ಮತ್ತು ಶೂರವೀರರ ಹೋರಾಟದ ಅಧ್ಯಾಯವಾಗಿದೆ. ಹಿಮಪಾತ, ದಟ್ಟ ಪರ್ವತಗಳು ಮತ್ತು ಅಸಹನೀಯ ವಾತಾವರಣದಲ್ಲಿಯೂ ನಮ್ಮ ಯೋಧರು ತಮ್ಮ ಜೀವದ ಹಂಗು ಕಾಣದೆ ಶತ್ರುಗಳಿಗೆ ತಕ್ಕ ಉತ್ತರ ನೀಡಿ, ವಿಜಯದ ಧ್ವಜ ಹಾರಿಸಿದರು ಎಂದು ಅವರು ಕೊಂಡಾಡಿದರು.
ಶತ್ರುಗಳನ್ನು ಶೌರ್ಯದಿಂದ ಹಿಮ್ಮೆಟ್ಟಿಸಿ, ತವರಿಗೆ ಹಿಂತಿರುಗದೆ ದೇಶದ ಭೂಭಾಗವನ್ನು ರಕ್ಷಿಸಲು ಜೀವವನ್ನೇ ತ್ಯಾಗ ಮಾಡಿದ ವೀರಪುತ್ತರು – ಅವರು ಸ್ಮರಣೆಗೂ ಮೀರಿದ ಮಹಾಪುರುಷರು ಎಂದರು.
ಅವರ ತ್ಯಾಗ, ಬಲಿದಾನ ಮತ್ತು ರಾಷ್ಟ್ರಪ್ರೇಮ – ಇವುವೆಲ್ಲಾ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವುದು. ಅವರ ವೀರಗಾಥೆಗಳು ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ.


ಭಾರತ ಮಾತೆಗೆ ಜೀವ ಅರ್ಪಿಸಿದ ವೀರರನ್ನು ಮರೆಯಲಾರೆವು. ವೀರ ಯೋಧರ ಬಲಿದಾನಕ್ಕೆ ನಮನಗಳು ಎಂದು ಹೇಳಿದರು.
ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕಾರ್ಗಿಲ್ ವಿಜಯೋತ್ಸವ ಕುರಿತಾಗಿ ಮಾತನಾಡಿ, ಕಾರ್ಗಿಲ್ ವಿಜಯ ದಿವಸ್”. ನಮ್ಮ ವೀರ ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದಿಂದ ಪ್ರಾಣ ಅರ್ಪಿಸಿ ದೇಶ ಗೆಲ್ಲಿಸಿ, ಭಾರತಾಂಬೆಯ ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿದ ಐತಿಹಾಸಿಕ ದಿನವಿಂದು. ನಮ್ಮ ಸೈನ್ಯದ ಐತಿಹಾಸಿಕ ವಿಜಯವನ್ನು ಸಂಭ್ರಮಿಸೋಣ. ಅಂದು ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸೋಣ ಎಂದರು.
ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮಲ್ಲಯ್ಯ ಅಂಬಾಡಿ, ಮುಖಂಡರಾದ ಡಾ. ಬಿ.ಎಚ್. ದಿವಟರ, ಮಾಜಿ ಸೈನಿಕರಾದ ರಾಜಪ್ಪ ಮಜ್ಜಿಗೆ ಹಾಗೂ ಶಂಕ್ರಪ್ಪ ಮಾಜಿ ಯೋಧರು, ಕಾಲೇಜಿನ ಕಾರ್ಯದರ್ಶಿಗಳಾದ ಶಿವರಾಜ್ ಅರಸೂರು, ಕಾಲೇಜಿನ ಪ್ರಿನ್ಸಿಪಲ್ ಕಿರಣ್ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು