12:59 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಾರ್ಗಿಲ್ ವಿಜಯ ದಿವಸ: ಕದ್ರಿ ಪಾರ್ಕ್ ಬಳಿಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ

26/07/2025, 22:54

ಮಂಗಳೂರು(reporterkarnataka.com): ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನೆಯಲೇಬೇಕು. ದಯವಿಟ್ಟು ನಾವೆಲ್ಲರೂ ಆಗಾಗ ಮಕ್ಕಳೊಂದಿಗೆ ಯುದ್ಧ ಸ್ಮಾರಕಗಳಿಗೆ ಭೇಟಿ ನೀಡಿ, ಅವರಿಗೆ ಸೈನಿಕರ ಮಹತ್ವವನ್ನು ತಿಳಿಸಬೇಕು. ಇಂದು ನಮ್ಮ ಸೈನ್ಯ ಮತ್ತು ದೇಶದ ಭದ್ರತೆಯ ವಿಷಯ ಬಂದಾಗ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ಕೊಡುವ ಪ್ರಧಾನಿ ನರೇಂದ್ರ ಮೋದಿಯಿಂದಾಗಿ ಭಾರತವು ಅತ್ಯಂತ ಬಲಿಷ್ಠವಾಗಿದೆ. ಹಾಗಾಗಿಯೇ ಪಾಕಿಸ್ತಾನ ಮಾತ್ರವಲ್ಲದೇ ಚೀನಾಕ್ಕೂ ಅವರದೇ ಭಾಷೆಯಲ್ಲಿ ಉತ್ತರ ಕೊಟ್ಟಾಗಿದೆ ಎಂದರು.
ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಗಣೇಶ್ ಕಾರ್ಣಿಕ್, ರವಿಶಂಕರ್ ಮಿಜಾರ್, ಅಶ್ವಿತ್ ಕೊಟ್ಟಾರಿ, ನಿಕಟಪೂರ್ವ ಮ.ನ.ಪಾ ಸದಸ್ಯರುಗಳು, ಮಾಜಿ ಸೈನಿಕರು, ಮಂಡಲದ ಯುವ ಮೋರ್ಚಾದ ಎಲ್ಲಾ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಪ್ರಮುಖರು, ಕಾರ್ಯಕರ್ತರು, ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು