6:20 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ

27/07/2025, 12:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ.


ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯ ಸ್ಥಳೀಯ ನಿವಾಸಿಗಳ ಜತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ.
ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ.
ನಿನ್ನೆ ಬೆಳಗ್ಗೆಯಿಂದಲೂ ಶೃಂಗೇರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕ್ಷಣ-ಕ್ಷಣಕ್ಕೂ ತುಂಗಾ-ಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ತುಂಗಾ-ಭದ್ರಾ ನದಿಯ ಇಕ್ಕೆಲಗಳ ತೋಟಗಳು ಬಹುತೇಕ ಜಲಾವೃತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು