6:35 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ

27/07/2025, 12:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ.


ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯ ಸ್ಥಳೀಯ ನಿವಾಸಿಗಳ ಜತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ.
ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ.
ನಿನ್ನೆ ಬೆಳಗ್ಗೆಯಿಂದಲೂ ಶೃಂಗೇರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕ್ಷಣ-ಕ್ಷಣಕ್ಕೂ ತುಂಗಾ-ಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ತುಂಗಾ-ಭದ್ರಾ ನದಿಯ ಇಕ್ಕೆಲಗಳ ತೋಟಗಳು ಬಹುತೇಕ ಜಲಾವೃತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು