10:08 PM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ

27/07/2025, 12:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ.


ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯ ಸ್ಥಳೀಯ ನಿವಾಸಿಗಳ ಜತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ.
ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ.
ನಿನ್ನೆ ಬೆಳಗ್ಗೆಯಿಂದಲೂ ಶೃಂಗೇರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕ್ಷಣ-ಕ್ಷಣಕ್ಕೂ ತುಂಗಾ-ಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ತುಂಗಾ-ಭದ್ರಾ ನದಿಯ ಇಕ್ಕೆಲಗಳ ತೋಟಗಳು ಬಹುತೇಕ ಜಲಾವೃತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು