12:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಮುಂದುವರಿದ ವ್ಯಾಘ್ರ ಹಾವಳಿ: ವಿರಾಜಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ

27/07/2025, 23:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ಮುಂದುವರೆದಿದೆ. ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಪಂಚಾಯ್ತಿಯ ವಿ. ಬಾಡಗ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯಲು ಬಿಟ್ಟಿದ ತೀತಿಮಾಡ ಬೋಪಣ್ಣ ಅಯ್ಯಪ್ಪನವರ ಹಾಲು ಕರೆಯುತ್ತಿದ್ದ ಹಸುವನ್ನು ಹುಲಿ ಕೊಂದು ಸ್ವಲ್ಪ ಭಾಗ ತಿಂದು ಹಾಕಿದ ಘಟನೆ ನಡೆದಿದೆ.
ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸು ಕಾಣೆಯಾಗಿ ನೆನ್ನೆಯಿಂದ ಹುಡುಕಿ ಇಂದು ಪಕ್ಕದ ತೋಟದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದೆ.

ಅಂದಾಜು 15 ಲೀಟರ್ನಷ್ಟು ಹಾಲು ಕೊಡುತ್ತಿದ್ದ ಹಸು ಹುಲಿ ದಾಳಿಗೆ ಬಲಿಯಾಗಿದ್ದು ಬೋಪಣ್ಣನವರು ಕಂಗೆಡುವಂತೆ ಮಾಡಿದೆ, ಸುತ್ತ ಮುತ್ತಲಿನ ಜನರು ಕೂಡ ಇನ್ನು ಮುಂದೆ ಹುಲಿಯ ಭಯದಲ್ಲೇ ಕಾಲ ಕಳೆಯುವಂತಾಗಿದೆ, ಜನ ಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಕೋರಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು