4:08 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಆರಂಭ

28/07/2025, 15:25

ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ದೂರದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಇಂದು ಆರಂಭಿಸಿದೆ.


ನೇತ್ರಾವತಿ ಸೇತುವೆಯ ಬಳಿಯ ಕಾಡಿನೊಳಗೆ ಎಸ್ಐಟಿ ತಂಡ ದೂರದಾರನನ್ನು ಸಂಪೂರ್ಣ ಕಪ್ಪು ಮುಸುಕಿನ ವಸ್ತ್ರ ಧರಿಸಿ ಕರೆದು ತಂದಿದೆ. ಎಸ್ ಐಟಿ ತಂಡದ ಹಿರಿಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಫೊರೆನ್ಸಿಕ್ ತಜ್ಞರು ಸಾಥ್ ನೀಡಿದ್ದಾರೆ. ಶವಗಳನ್ನು ಹೂತ ಜಾಗವನ್ನು ಗುರುತಿಸುವ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ.
ಕಳೆದ ಎರಡು ದಿನಗಳಿಂದ ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿ ತಂಡದಿಂದ ದೂರುದಾರನ ವಿಚಾರಣೆ ನಡೆದಿದೆ. ಮೊದಲ ದಿನ ಐಪಿಎಸ್ ಅಧಿಕಾರಿ ಅನುಚೇತ್ ಅವರು ವಿಚಾರಣೆ ನಡೆಸಿದ್ದರು. ಎರಡನೇ ದಿನ ಎಸ್ ಐಟಿ ತಂಡದ ಮುಖ್ಯಸ್ಥ ಪ್ರಣವ್ ಮೊಹಂತಿಯವರೇ ಮಂಗಳೂರಿಗೆ ಆಗಮಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದರು. ಮೊದಲ ದಿನವೇ ದೂರುದಾರ ಸ್ಫೋಟಕ ಮಾಹಿತಿಯನ್ನು ನೀಡಿದ ಹಿನ್ನೆಲೆಯಲ್ಲಿ ಎರಡನೇ ದಿನವಾದ ನಿನ್ನೆ ಸ್ವತಃ ಟೀಮ್ ಮುಖ್ಯಸ್ಥ ಮೊಹಂತಿ ಆಗಮಿಸಿದ್ದರು ಎನ್ನಲಾಗಿದೆ. ಇದಕ್ಕೆಲ್ಲ ಪುಷ್ಠಿ ನೀಡುವಂತೆ ಇಂದು ಸ್ಥಳ ಮಹಜರು ಆರಂಭವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು