2:09 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಸಂಬಳವಿಲ್ಲದೆ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು!: ವೈದ್ಯರಿಗೊಂದು ನ್ಯಾಯ?; ಇತರರಿಗೊಂದು ನ್ಯಾಯ? ಜೆಸಿ ಆಸ್ಪತ್ರೆಯಲ್ಲಿ ಇದೆಂತಾ ಅವ್ಯವಸ್ಥೆ..!?

29/07/2025, 13:00

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ 5 ತಿಂಗಳಿನಿಂದ ಸಂಬಳ ಕೊಡದೇ ಸರ್ಕಾರ ಸತಾಯಿಸುತ್ತಿದ್ದು ವೈದ್ಯರಿಗೆ ಸಂಬಳವಾಗುತ್ತಿದೆ, ಆದರೆ ಅವರಿಗೆ ಸಹಾಯಕ್ಕಾಗಿ ಇರುವ ಸಿಬ್ಬಂದಿಗಳಿಗೆ ಸಂಬಳವಿಲ್ಲ ಎಂದು ಅಲ್ಲಿನ ಸಿಬ್ಬಂದಿಗಳು ಗೊಳೋ ಎಂದು ಅಂಗಲಾಚಿದ್ದಾರೆ.
ಜೆಸಿ ಆಸ್ಪತ್ರೆಯಲ್ಲಿ ತಾಲೂಕಿನ ಜನರಲ್ಲದೆ ಕೊಪ್ಪ, ಎನ್ ಆರ್ ಪುರ, ಹೊಸನಗರ, ಆಗುಂಬೆ ಭಾಗಗಳಿಂದ ದಿನ ನಿತ್ಯ ನೂರಾರು ರೋಗಿಗಳು ಆಗಮಿಸುತ್ತಾರೆ. ಜೆಸಿ ಆಸ್ಪತ್ರೆಯಲ್ಲಿ ಈಗ ನೂತನವಾಗಿ ಬಂದ ವೈದ್ಯರ ತಂಡ ಉತ್ತಮ ಸೇವೆ ನೀಡುತ್ತಿದ್ದು ದಿನದಿಂದ ದಿನಕ್ಕೆ ಜನಪ್ರಿಯ ಹೊಂದುತ್ತಿದ್ದು ಆದರೆ ಅಲ್ಲಿನ ಸಿಬ್ಬಂದಿಗಳಿಗೆ ಮಾತ್ರ ಯಾವುದೇ ಸಂಬಳ ನೀಡದೆ ಕಷ್ಟದ ಪರಿಸ್ಥಿತಿಗೆ ಸರ್ಕಾರ ದೂಕಿದಂತೆ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ಪ್ರತಿಯೊರ್ವ ರಾಜಕಾರಣಿಗಳಿಗೆ
ಗೊತ್ತಿದ್ದರೂ ಸಹ ಮೌನವಾಗಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಸಹ ಸಂಬಳ ಆಗದ ಬಗ್ಗೆ ತಿಳಿದಿದೆ. ಆದರೆ ಇಲ್ಲಿಯವರೆಗೆ ಎಲ್ಲರೂ ಮೌನ ವಹಿಸಿದ್ದಾರೆ. ಹೀಗೆ ಆದರೆ ನಮ್ಮ ಕುಟುಂಬ ಬೀದಿಗೆ ಬರಬೇಕಾಗುತ್ತದೆ ಎಂದು ಅಲ್ಲಿನ ಸಿಬ್ಬಂದಿಗಳು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು