1:31 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಸಂಬಳವಿಲ್ಲದೆ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು!: ವೈದ್ಯರಿಗೊಂದು ನ್ಯಾಯ?; ಇತರರಿಗೊಂದು ನ್ಯಾಯ? ಜೆಸಿ ಆಸ್ಪತ್ರೆಯಲ್ಲಿ ಇದೆಂತಾ ಅವ್ಯವಸ್ಥೆ..!?

29/07/2025, 13:00

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ 5 ತಿಂಗಳಿನಿಂದ ಸಂಬಳ ಕೊಡದೇ ಸರ್ಕಾರ ಸತಾಯಿಸುತ್ತಿದ್ದು ವೈದ್ಯರಿಗೆ ಸಂಬಳವಾಗುತ್ತಿದೆ, ಆದರೆ ಅವರಿಗೆ ಸಹಾಯಕ್ಕಾಗಿ ಇರುವ ಸಿಬ್ಬಂದಿಗಳಿಗೆ ಸಂಬಳವಿಲ್ಲ ಎಂದು ಅಲ್ಲಿನ ಸಿಬ್ಬಂದಿಗಳು ಗೊಳೋ ಎಂದು ಅಂಗಲಾಚಿದ್ದಾರೆ.
ಜೆಸಿ ಆಸ್ಪತ್ರೆಯಲ್ಲಿ ತಾಲೂಕಿನ ಜನರಲ್ಲದೆ ಕೊಪ್ಪ, ಎನ್ ಆರ್ ಪುರ, ಹೊಸನಗರ, ಆಗುಂಬೆ ಭಾಗಗಳಿಂದ ದಿನ ನಿತ್ಯ ನೂರಾರು ರೋಗಿಗಳು ಆಗಮಿಸುತ್ತಾರೆ. ಜೆಸಿ ಆಸ್ಪತ್ರೆಯಲ್ಲಿ ಈಗ ನೂತನವಾಗಿ ಬಂದ ವೈದ್ಯರ ತಂಡ ಉತ್ತಮ ಸೇವೆ ನೀಡುತ್ತಿದ್ದು ದಿನದಿಂದ ದಿನಕ್ಕೆ ಜನಪ್ರಿಯ ಹೊಂದುತ್ತಿದ್ದು ಆದರೆ ಅಲ್ಲಿನ ಸಿಬ್ಬಂದಿಗಳಿಗೆ ಮಾತ್ರ ಯಾವುದೇ ಸಂಬಳ ನೀಡದೆ ಕಷ್ಟದ ಪರಿಸ್ಥಿತಿಗೆ ಸರ್ಕಾರ ದೂಕಿದಂತೆ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ಪ್ರತಿಯೊರ್ವ ರಾಜಕಾರಣಿಗಳಿಗೆ
ಗೊತ್ತಿದ್ದರೂ ಸಹ ಮೌನವಾಗಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಸಹ ಸಂಬಳ ಆಗದ ಬಗ್ಗೆ ತಿಳಿದಿದೆ. ಆದರೆ ಇಲ್ಲಿಯವರೆಗೆ ಎಲ್ಲರೂ ಮೌನ ವಹಿಸಿದ್ದಾರೆ. ಹೀಗೆ ಆದರೆ ನಮ್ಮ ಕುಟುಂಬ ಬೀದಿಗೆ ಬರಬೇಕಾಗುತ್ತದೆ ಎಂದು ಅಲ್ಲಿನ ಸಿಬ್ಬಂದಿಗಳು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು