6:53 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!!

29/07/2025, 14:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ.
ಕಾಡಾನೆ ಬಂದದ್ದು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ.
ಕೊಡಗು ಜಿಲ್ಲೆಯ ಪಾಲಿ ಬೆಟ್ಟದಿಂದ ಮೂಡಿಗೆರೆಯ
ಗೋಣಿಬೀಡಿಗೆ ಒಲ್ಡ್ ಬೆಲ್ಟ್ ಕಾಡಾನೆ ಬಂದಿದೆ.
ನಿನ್ನೆ ಬೆಳಗ್ಗೆ ಮಡಿಕೇರಿಯ ಪಾಲಿ ಬೆಟ್ಟದಲ್ಲಿ ಜನರು ಓಲ್ಡ್ ಬೆಲ್ಟ್ ಕಾಡಾನೆಯನ್ನು ಓಡಿಸಿದ್ದರು. ಈ ಕುರಿತು
ಮಡಿಕೇರಿಯ ಪಾಲಿಬೆಟ್ಟದಲ್ಲಿದ್ದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಿದೆ.


ಸಂಜೆ ವೇಳೆಗೆ ಮರಿಯನ್ನು ಹುಡುಕಿಕೊಂಡು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ ಬಂದಿದೆ. ಓಲ್ಡ್ ಬೆಲ್ಟ್ ಕೊರಳಲ್ಲಿರೋ ರೆಡಿಯೋ ಕಾಲರ್ ನಿಂದ ಲೊಕೇಶನ್ ಮಾಹಿತಿ ಲಭ್ಯವಾಗಿದೆ.
ಸದ್ಯಕ್ಕೆ ಬೇಲೂರು-ಮೂಡಿಗೆರೆಯ ಗಡಿ ಲಕ್ಷ್ಮಿ ಎಸ್ಟೇಟ್ ನಲ್ಲಿದೆಯೆಂಬ ಮಾಹಿತಿ ಇದೆ. ಓಲ್ಡ್ ಬೆಲ್ಟ್ ಮರಿ ತಿಂಗಳುಗಳ ಮುಂಚೆಯೇ ಸಾವನ್ನಪ್ಪಿದೆ.
ಆದರೆ, ಸಾವನ್ನಪ್ಪಿರೋ ಮರಿ ಹುಡುಕಿಕೊಂಡು 150 ಕಿ.ಮೀ ದೂರ ಈ ಹೆಣ್ಣಾನೆ ಬಂದಿದೆ.
ಲಕ್ಷ್ಮಿ ಎಸ್ಟೇಟ್ ಚಿಕ್ಕಮಗಳೂರು-ಹಾಸನ ಜಿಲ್ಲೆಯ ಗಡಿ ಭಾಗದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು