5:51 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!!

29/07/2025, 14:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ.
ಕಾಡಾನೆ ಬಂದದ್ದು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ.
ಕೊಡಗು ಜಿಲ್ಲೆಯ ಪಾಲಿ ಬೆಟ್ಟದಿಂದ ಮೂಡಿಗೆರೆಯ
ಗೋಣಿಬೀಡಿಗೆ ಒಲ್ಡ್ ಬೆಲ್ಟ್ ಕಾಡಾನೆ ಬಂದಿದೆ.
ನಿನ್ನೆ ಬೆಳಗ್ಗೆ ಮಡಿಕೇರಿಯ ಪಾಲಿ ಬೆಟ್ಟದಲ್ಲಿ ಜನರು ಓಲ್ಡ್ ಬೆಲ್ಟ್ ಕಾಡಾನೆಯನ್ನು ಓಡಿಸಿದ್ದರು. ಈ ಕುರಿತು
ಮಡಿಕೇರಿಯ ಪಾಲಿಬೆಟ್ಟದಲ್ಲಿದ್ದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಿದೆ.


ಸಂಜೆ ವೇಳೆಗೆ ಮರಿಯನ್ನು ಹುಡುಕಿಕೊಂಡು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ ಬಂದಿದೆ. ಓಲ್ಡ್ ಬೆಲ್ಟ್ ಕೊರಳಲ್ಲಿರೋ ರೆಡಿಯೋ ಕಾಲರ್ ನಿಂದ ಲೊಕೇಶನ್ ಮಾಹಿತಿ ಲಭ್ಯವಾಗಿದೆ.
ಸದ್ಯಕ್ಕೆ ಬೇಲೂರು-ಮೂಡಿಗೆರೆಯ ಗಡಿ ಲಕ್ಷ್ಮಿ ಎಸ್ಟೇಟ್ ನಲ್ಲಿದೆಯೆಂಬ ಮಾಹಿತಿ ಇದೆ. ಓಲ್ಡ್ ಬೆಲ್ಟ್ ಮರಿ ತಿಂಗಳುಗಳ ಮುಂಚೆಯೇ ಸಾವನ್ನಪ್ಪಿದೆ.
ಆದರೆ, ಸಾವನ್ನಪ್ಪಿರೋ ಮರಿ ಹುಡುಕಿಕೊಂಡು 150 ಕಿ.ಮೀ ದೂರ ಈ ಹೆಣ್ಣಾನೆ ಬಂದಿದೆ.
ಲಕ್ಷ್ಮಿ ಎಸ್ಟೇಟ್ ಚಿಕ್ಕಮಗಳೂರು-ಹಾಸನ ಜಿಲ್ಲೆಯ ಗಡಿ ಭಾಗದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು