8:42 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!!

29/07/2025, 14:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ.
ಕಾಡಾನೆ ಬಂದದ್ದು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ.
ಕೊಡಗು ಜಿಲ್ಲೆಯ ಪಾಲಿ ಬೆಟ್ಟದಿಂದ ಮೂಡಿಗೆರೆಯ
ಗೋಣಿಬೀಡಿಗೆ ಒಲ್ಡ್ ಬೆಲ್ಟ್ ಕಾಡಾನೆ ಬಂದಿದೆ.
ನಿನ್ನೆ ಬೆಳಗ್ಗೆ ಮಡಿಕೇರಿಯ ಪಾಲಿ ಬೆಟ್ಟದಲ್ಲಿ ಜನರು ಓಲ್ಡ್ ಬೆಲ್ಟ್ ಕಾಡಾನೆಯನ್ನು ಓಡಿಸಿದ್ದರು. ಈ ಕುರಿತು
ಮಡಿಕೇರಿಯ ಪಾಲಿಬೆಟ್ಟದಲ್ಲಿದ್ದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಿದೆ.


ಸಂಜೆ ವೇಳೆಗೆ ಮರಿಯನ್ನು ಹುಡುಕಿಕೊಂಡು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ ಬಂದಿದೆ. ಓಲ್ಡ್ ಬೆಲ್ಟ್ ಕೊರಳಲ್ಲಿರೋ ರೆಡಿಯೋ ಕಾಲರ್ ನಿಂದ ಲೊಕೇಶನ್ ಮಾಹಿತಿ ಲಭ್ಯವಾಗಿದೆ.
ಸದ್ಯಕ್ಕೆ ಬೇಲೂರು-ಮೂಡಿಗೆರೆಯ ಗಡಿ ಲಕ್ಷ್ಮಿ ಎಸ್ಟೇಟ್ ನಲ್ಲಿದೆಯೆಂಬ ಮಾಹಿತಿ ಇದೆ. ಓಲ್ಡ್ ಬೆಲ್ಟ್ ಮರಿ ತಿಂಗಳುಗಳ ಮುಂಚೆಯೇ ಸಾವನ್ನಪ್ಪಿದೆ.
ಆದರೆ, ಸಾವನ್ನಪ್ಪಿರೋ ಮರಿ ಹುಡುಕಿಕೊಂಡು 150 ಕಿ.ಮೀ ದೂರ ಈ ಹೆಣ್ಣಾನೆ ಬಂದಿದೆ.
ಲಕ್ಷ್ಮಿ ಎಸ್ಟೇಟ್ ಚಿಕ್ಕಮಗಳೂರು-ಹಾಸನ ಜಿಲ್ಲೆಯ ಗಡಿ ಭಾಗದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು