4:28 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಮಂಗಳೂರು- ಚಿತ್ರದುರ್ಗ ಖಾಸಗಿ ಬಸ್ ಶಿವಮೊಗ್ಗ ಬಳಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ

30/07/2025, 14:21

ಶಿವಮೊಗ್ಗ(reporterkarnataka.com): ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ‌ ಗಂಭೀರ ಗಾಯಗೊಂಡ ದಾರುಣ ಘಟನೆ ಗಾಜನೂರು ಸಮೀಪ ಬುಧವಾರ ಮುಂಜಾನೆ ನಡೆದಿದೆ.
ಗಾಜನೂರು ಡ್ಯಾಂ ಬಳಿ ಮುಂಜಾನೆ
ಸುಮಾರು 3 ಗಂಟೆ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ ದುರ್ಗಾಂಬ ಬಸ್ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಲಾರಿ ಆಂಧ್ರ ಪ್ರದೇಶದ್ದಾಗಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು‌. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್​ ಇನ್ಸ್​ಪೆಕ್ಟರ್​ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್​ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು