6:11 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ ಸಚಿವೆ

30/07/2025, 18:04

ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬಾಲಕರ ಬಾಲ ಮಂದಿರದಲ್ಲಿ ವಿವಿಧ ರಾಜ್ಯಗಳಿಂದ 110 ಮಕ್ಕಳಿದ್ದು ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸಿದರು. ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಇಲಾಖೆಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

* *ಚಿಣ್ಣರನ್ನು ಮುದ್ದಾಡಿದ ಸಚಿವರು*
ಬಳಿಕ ಸರ್ಕಾರಿ ಶಿಶು ಮಂದಿರಕ್ಕೂ ಭೇಟಿ ನೀಡಿದ ಸಚಿವರು, ಶಿಶುಗಳ ಪಾಲನೆ, ಪೋಷಣೆ ಹಾಗೂ ಪುಟಾಣಿಗಳ ಆರೈಕೆ ಕುರಿತು ಪರಿಶೀಲನೆ ನಡೆಸಿದರು.
ಆರು ವರ್ಷದ ಒಳಗಿನ 46 ಮಕ್ಕಳು ಕೇಂದ್ರದಲ್ಲಿದ್ದಾರೆ. ಶಿಶುಗಳ ಉತ್ತಮ ಆರೈಕೆಯು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ಎಂದು ಸಚಿವರು ಹೇಳಿದರು.
ಮಕ್ಕಳ ಪಾಲನೆ ಮಾಡುತ್ತಿರುವ ಸಿಬ್ಬಂದಿ ವರ್ಗದವರ ಕಾರ್ಯವೈಖರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಚಿಣ್ಣರನ್ನು‌ ಎತ್ತಿಕೊಂಡು ಮುದ್ದಾಡಿದರು.
ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಉಪ ನಿರ್ದೇಶಕರಾದ ಸುಮಂಗಲಾ ಮಳಾಪುರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು