5:36 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು ಹರಿದ ಬ್ಲೌಸ್ ತುಂಡು ಎಟಿಎಂ, ಪಾನ್ ಕಾರ್ಡ್?

30/07/2025, 19:38

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ದೂರುದಾರ ಗುರುತಿಸಿದ 13 ಸ್ಪಾಟ್ ಗಳ ಪೈಕಿ 3 ಸ್ಪಾಟ್ ಗಳನ್ನು ಈಗಾಗಲೇ ವಿಶೇಷ ತನಿಖಾ ತಂಡ(ಎಸ್ಐಟಿ) ಉತ್ಖನನ ನಡೆಸಿದರೂ ಯಾವುದೇ ಅಸ್ತಿಪಂಜರದ ಕುರುಹು ಲಭ್ಯವಾಗಿಲ್ಲ ಎನ್ನುವ ಸುದ್ದಿಯ ನಡುವೆ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಮೊದಲು ದಿನ ಅಗೆದ 1ನೇ ಸ್ಪಾಟ್ ನಲ್ಲಿ ಹರಿದ ರವಕೆಯ ತುಂಡು ತಲಾ ಒಂದು ಎಟಿಎಂ ಹಾಗೂ ಪಾನ್ ಕಾರ್ಡ್ ದೊರೆತ ಬಗ್ಗೆ ಮಾಹಿತಿ ಲಭಿಸಿದೆ.
ಪುರುಷನ ಎಟಿಎಂ ಆದರೆ, ಮಹಿಳೆಯ ಪಾನ್ ಕಾರ್ಡ್ ಲಭಿಸಿದೆ. ಲಕ್ಷ್ಮೀ ಎಂಬ ಹೆಸರಿನ ವಿವಾಹಿತ ಮಹಿಳೆಯ ಪಾನ್ ಕಾರ್ಡ್ ಇದಾಗಿದೆ. ಈ ಕುರಿತು ವಿಚಾರಣೆ ನಡೆಯುತ್ತಿದ್ದಂತೆ ಧರ್ಮಸ್ಥಳದ ಗಂಗೋತ್ರಿ ವಸತಿಗೃಹದ ಸಮೀಪ ಸುಮಾರು 16 ವರ್ಷಗಳ ಹಿಂದೆ ಅಂದರೆ 2009ರಲ್ಲಿ ಲಕ್ಷ್ಮೀ ಎಂಬ ಹೆಸರಿನ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಕೇಸ್ ದಾಖಲಾದ ಬಗ್ಗೆ ಮಾಹಿತಿ ಲಭಿಸಿದೆ. ಇದೀಗ ಸ್ಪಾಟ್ ನಂಬರ್ 1ರಲ್ಲಿ ದೊರೆತ ಪಾನ್ ಕಾರ್ಡ್ 2009ರಲ್ಲಿ ಗಂಗೋತ್ರಿ ಸಮೀಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಲಕ್ಷ್ಮೀ ಎಂಬವರಿಗೆ ಸೇರಿದ್ದೇ ಎನ್ನುವುದರ ಕುರಿತು ತನಿಖೆ ನಡೆಯುತ್ತಿದೆ. ಆದರೆ, ಎಸ್ಐಟಿ ಈ ಕುರಿತು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಈ ನಡುವೆ ಎಸ್ಐಟಿ ಕಳೆದ 20 ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸರ ಲಿಸ್ಟನ್ನು ಎಸ್ ಐಟಿ ಕೇಳಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು