2:40 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕುಡಿತದ ಮತ್ತಿನಲ್ಲಿ ಹೆತ್ತಬ್ಬೆಯನ್ನೇ ಕೊಂದು ಸುಟ್ಟು ಹಾಕಿದ ಪಾಪಿ ಪುತ್ರ: ಅಪ್ಪನಿಗೂ ಚರ್ಮ ಸುಲಿಯುವ ತರಹ ಬಾರಿಸಿದ್ದ!

31/07/2025, 14:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಡಿದ ಮತ್ತಿನಲ್ಲಿ ಪುತ್ರನೊಬ್ಬ ತಾಯಿಯನ್ನು ಕೊಂದು, ಆಕೆ ಮೃತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿದ ಆಘಾತಕ್ಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 52 ವರ್ಷದ ಭವಾನಿ ಎಂದು ಗುರುತಿಸಲಾಗಿದೆ. ಅಮ್ಮನನ್ನೇ ಕೊಂದ ಪಾಪಿ ಪುತ್ರನನ್ನು 28ರ ಹರೆಯದ ಪವನ್ 28 ಎಂದು ಗುರುತಿಸಲಾಗಿದೆ. ಪವನ್ ಮದುವೆ ಕೂಡ ಆಗಿರಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ. ಕಳೆದ ರಾತ್ರಿ ತಾಯಿಯನ್ನ ಕೊಂದು ಮನೆಯೊಳಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದಾನೆ. ಬಳಿಕ ತಾಯಿ ಮೃತದೇಹ ಬೆಂಕಿಯಲ್ಲಿ ಬೇಯುತ್ತಿದ್ದರೆ ಕೊಲೆಗಾರ ಮಗ ಪ್ರಜ್ಞೆ ಇಲ್ಲದವನಂತೆ ಅಲ್ಲೇ ಪಕ್ಕದಲ್ಲಿ ಮಲಗಿದ್ದಾನೆ. ತಾಯಿ ಭವಾನಿ ಮೃತದೇಹ ಬಹುತೇಕ ಸುಟ್ಟುಹೋಗಿದ್ದು ಕಾಲು ಹಾಗೂ ಕೈ ಮಾತ್ರ ಉಳಿದಿದೆ. ಅಕ್ಕಪಕ್ಕದವರಿಂದ ವಿಷಯ ತಿಳಿದು ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಯಿಯನ್ನೇ ಕೊಂದು ಸುಟ್ಟು ಹಾಕಿದ ಈ ಪುತ್ರ ತಿಂಗಳ ಹಿಂದೆ ಅಪ್ಪನ ಚರ್ಮ ಸುಲಿಯುವಂತೆ ಹೊಡೆದಿದ್ದ. ತಾಯಿಯನ್ನೇ ಕೊಂದವ ಅಪ್ಪನ ಮೇಲೂ ಮೃಗೀಯ ವರ್ತನೆ ತೋರಿದ್ದ.
ಲೆದರ್ ಬೆಲ್ಟ್ ನಲ್ಲಿ ಅಪ್ಪನ ಬೆನ್ನಿನ ಚರ್ಮ ಸುಲಿಯುವಂತೆ ಹೊಡೆದಿದ್ದ. ಸೋಮೇಗೌಡ ಮಗನಿಂದಲೇ ಬೆನ್ನಿನ ಚರ್ಮ ಸುಲಿಸಿಕೊಂಡ ನತದೃಷ್ಟ ಅಪ್ಪ.
ಸೋಮೇಗೌಡನ ಬೆನ್ನಿನ ಸ್ಥಿತಿ ನೋಡಿದ್ರೆ ಎಂಥವರ ಕಣ್ಣಲ್ಲೂ ನೀರು ಬರುತ್ತೆ. ನಿತ್ಯ ಕೂಲಿ ಮಾಡೋದು ಸಂಜೆ ಕುಡಿದು ಬಂದು ಅಪ್ಪ-ಅಮ್ಮನನ್ನ ಹೊಡೆಯೋದೇ ಇವನ ಕಾಯಕ. ಮಗನೆಂಬ ಮಮಕಾರದಿಂದ ಯಾರಿಗೂ ಹೇಳದೆ ನೋವು ಅನುಭವಿಸುತ್ತಿದ್ದ ಹೆತ್ತವರು.
ವಿಷಯ ತಿಳಿದು ಅಕ್ಕಪಕ್ಕದವರು ಹಲವು ಬಾರಿ ಪಾಪಿ ಪುತ್ರ ಪವನ್ ಗೆ ಬುದ್ಧಿ ಹೇಳಿದ್ದರು.
ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಾಯಿಯನ್ನ ಕೊಂದ ಮಗ ಪವನ್ ನನ್ನ ಆಲ್ದೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು